<p><strong>ಮಂಗಳೂರು:</strong> 'ಅಧಿಕಾರ ಶಾಶ್ವತ ಅಲ್ಲ. ಅಧಿಕಾರವನ್ನು ಯಾವತ್ತಿದ್ದರೂ ಬಿಡಲೇ ಬೇಕು. ಹತ್ತು ವರ್ಷದ ನಂತರವಾದರೂ ಬಿಡಬೇಕು. ಅಧಿಕಾರವನ್ನು ಯಾವಾಗ ಬಿಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧಿ- ನಾರಾಯಣ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅವರು ಇಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯರ್ಶಿ ಕೆ.ಸಿ ವೇಣುಗೋಪಾಲ್ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p><p>'ಅವರು ಕಾರ್ಯಕ್ರಮಕ್ಕೆ ಬಂದಿದಾರಷ್ಟೇ. ಅವರ ನಡುವೆ ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ. ಅವರಿಬ್ಬರು ಏನು ಮಾತುಕತೆ ನಡೆಸಿದ್ದಾರೆ ಎಂದು ಅವರನ್ನೆ ಕೇಳಬೇಕು' ಎಂದರು.</p><p>ಮಂಗಳೂರು ವಿಮಾನನಿಲ್ದಾಣದಲ್ಲಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಜೈಕಾರ ಹಾಕಿದ ಕುರಿತು ಪ್ರತಿಕ್ರಿಯಿಸಿದ ಅವರು, 'ಆ ರೀತಿ ಜೈಕಾರ ಹಾಕಿದರೆ ಏನು ಪ್ರಯೋಜನ ಆಗುವುದಿಲ್ಲ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲಾ ತಿಳಿಯಾಗಿದೆ. ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ' ಎಂದರು.</p>.ಮಂಗಳೂರು: ಕೆ.ಸಿ. ವೇಣುಗೋಪಾಲ್- ಸಿಎಂ ಸಿದ್ದರಾಮಯ್ಯ ಮಾತುಕತೆ.ಗುಲಾಮಗಿರಿ ವ್ಯವಸ್ಥೆ ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗದು: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> 'ಅಧಿಕಾರ ಶಾಶ್ವತ ಅಲ್ಲ. ಅಧಿಕಾರವನ್ನು ಯಾವತ್ತಿದ್ದರೂ ಬಿಡಲೇ ಬೇಕು. ಹತ್ತು ವರ್ಷದ ನಂತರವಾದರೂ ಬಿಡಬೇಕು. ಅಧಿಕಾರವನ್ನು ಯಾವಾಗ ಬಿಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ' ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p><p>ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬುಧವಾರ ಏರ್ಪಡಿಸಿದ್ದ ಮಹಾತ್ಮ ಗಾಂಧಿ- ನಾರಾಯಣ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಅವರು ಇಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದರು.</p><p>ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯರ್ಶಿ ಕೆ.ಸಿ ವೇಣುಗೋಪಾಲ್ ಇಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.</p><p>'ಅವರು ಕಾರ್ಯಕ್ರಮಕ್ಕೆ ಬಂದಿದಾರಷ್ಟೇ. ಅವರ ನಡುವೆ ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ. ಅವರಿಬ್ಬರು ಏನು ಮಾತುಕತೆ ನಡೆಸಿದ್ದಾರೆ ಎಂದು ಅವರನ್ನೆ ಕೇಳಬೇಕು' ಎಂದರು.</p><p>ಮಂಗಳೂರು ವಿಮಾನನಿಲ್ದಾಣದಲ್ಲಿ ಕಾರ್ಯಕರ್ತರು ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪರ ಜೈಕಾರ ಹಾಕಿದ ಕುರಿತು ಪ್ರತಿಕ್ರಿಯಿಸಿದ ಅವರು, 'ಆ ರೀತಿ ಜೈಕಾರ ಹಾಕಿದರೆ ಏನು ಪ್ರಯೋಜನ ಆಗುವುದಿಲ್ಲ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲಾ ತಿಳಿಯಾಗಿದೆ. ಉಭಯ ನಾಯಕರು ಈಗಾಗಲೇ ಮಾತನಾಡಿದ್ದಾರೆ' ಎಂದರು.</p>.ಮಂಗಳೂರು: ಕೆ.ಸಿ. ವೇಣುಗೋಪಾಲ್- ಸಿಎಂ ಸಿದ್ದರಾಮಯ್ಯ ಮಾತುಕತೆ.ಗುಲಾಮಗಿರಿ ವ್ಯವಸ್ಥೆ ಕಿತ್ತೆಸೆಯದೇ ಸ್ವಾತಂತ್ರ್ಯ ಯಶಸ್ವಿಯಾಗದು: ಸಿದ್ದರಾಮಯ್ಯ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>