<p><strong>ಮಂಗಳೂರು: </strong>ವಿಧಾನಸಭಾ ಕಲಾಪ ಸಮರ್ಪಕವಾಗಿ ನಡೆಯದಿರಲು ಬಿಜೆಪಿಯ ಸಂವಿಧಾನ ವಿರೋಧಿ ಧೋರಣೆ ಕಾರಣ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ರಾಷ್ಟ್ರ ಧ್ವಜಕ್ಕೆ, ದೇಶಕ್ಕೆ ಅವಮಾನ ಮಾಡಿದ್ದು, ಕೇಂದ್ರ ನಾಯಕರು ಈಶ್ವರಪ್ಪನವರನ್ನು ಬೆಂಬಲಿಸುತ್ತಿರುವುದು ವಿಷಾದನೀಯ. ಇದರಿಂದ ಬಿಜೆಪಿಯ ಮುಖವಾಡ ಕಳಚಿದೆ ಎಂದರು.</p>.<p>ಸದನ ನಡೆಸಲು ಕಾಂಗ್ರೆಸ್ ಅಡ್ಡಿಪಡಿಸಿದೆ ಎನ್ನುವ ಬಿಜೆಪಿ ಮುಖಂಡರ ಹೇಳಿಕೆ ಸರಿಯಲ್ಲ. ಈ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಸಾಕಷ್ಟು ಸಮಸ್ಯೆಗಳ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೂ ಅನುಷ್ಠಾನ ಆಗುತ್ತಿಲ್ಲ. ಬಡವರಿಗೆ ಮನೆ, ನಿವೇಶನ, ಪಡಿತರ ಚೀಟಿ ದೊರೆಯುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆ ನಿರ್ವಹಿಸುತ್ತಿಲ್ಲ ಎಂದು ದೂರಿದರು.</p>.<p>ಉಳ್ಳಾಲದ ರಾಣಿ ಅಬ್ಬಕ್ಕನ ಬಗ್ಗೆ ಗೌರವವಿದ್ದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಡುಗಡೆ ಮಾಡಲಾದ ₹8 ಕೋಟಿ ವೆಚ್ಚದ ಭವನದ ಯೋಜನೆ ಕೈ ಗೆತ್ತಿಕೊಳ್ಳಲಿ. ಲೇಡಿಗೋಶನ್ ಆಸ್ಪತ್ರೆಯ ಹೆಸರು ಬದಲಾಯಿಸುವ ಬದಲು ಅಲ್ಲಿಗೆ ಇನ್ನಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಲಿ ಎಂದು ಒತ್ತಾಯಿಸಿದರು.</p>.<p>ಬ್ಯಾರಿ ಭವನದ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ ನಡೆಯುತ್ತಿದೆ. ಇದರಲ್ಲಿ ಕಾಂಗ್ರೆಸ್ ಪಾತ್ರ ಇಲ್ಲ ಎಂದರು.</p>.<p>ರಷ್ಯಾ- ಉಕ್ರೇನ್ನಲ್ಲಿ ಯುದ್ಧದ ವಾತಾವರಣ ಉಂಟಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾಲದಲ್ಲಿ ಎಚ್ಚೆತ್ತುಕೊಳ್ಳದೆ ಇರುವುದರಿಂದ ಅಲ್ಲಿ ಕೆಲವು ಭಾರತೀಯರು ಆತಂಕದಲ್ಲಿ ಇರುವಂತಾಗಿದೆ ಎಂದು ತಿಳಿಸಿದರು.</p>.<p>ಕನ್ಯಾಡಿಯಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಕೊಲೆ ಮಾಡಿರುವುದು ಖಂಡನೀಯ. ಈ ವಿಷಯದಲ್ಲಿ ಬಿಜೆಪಿ ಮೌನ ವಹಿಸಿರುವುದು ಏಕೆ? ಕೂಡಲೇ ಆ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಾಹುಲ್ ಹಮೀದ್, ಸಂತೋಷ್ ಕುಮಾರ್ ಶೆಟ್ಟಿ, ಜಕ್ರೀಯ, ಮುರಳಿ ನರಿಂಗಾನ, ಪಾಲಿಕೆ ಸದಸ್ಯ ಲತೀಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ವಿಧಾನಸಭಾ ಕಲಾಪ ಸಮರ್ಪಕವಾಗಿ ನಡೆಯದಿರಲು ಬಿಜೆಪಿಯ ಸಂವಿಧಾನ ವಿರೋಧಿ ಧೋರಣೆ ಕಾರಣ ಎಂದು ವಿಧಾನಸಭೆ ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಆರೋಪಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡರು ರಾಷ್ಟ್ರ ಧ್ವಜಕ್ಕೆ, ದೇಶಕ್ಕೆ ಅವಮಾನ ಮಾಡಿದ್ದು, ಕೇಂದ್ರ ನಾಯಕರು ಈಶ್ವರಪ್ಪನವರನ್ನು ಬೆಂಬಲಿಸುತ್ತಿರುವುದು ವಿಷಾದನೀಯ. ಇದರಿಂದ ಬಿಜೆಪಿಯ ಮುಖವಾಡ ಕಳಚಿದೆ ಎಂದರು.</p>.<p>ಸದನ ನಡೆಸಲು ಕಾಂಗ್ರೆಸ್ ಅಡ್ಡಿಪಡಿಸಿದೆ ಎನ್ನುವ ಬಿಜೆಪಿ ಮುಖಂಡರ ಹೇಳಿಕೆ ಸರಿಯಲ್ಲ. ಈ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಸಾಕಷ್ಟು ಸಮಸ್ಯೆಗಳ ಬಗ್ಗೆ ಚರ್ಚೆ ಆಗಿದೆ. ಆದರೆ ಯಾವುದೂ ಅನುಷ್ಠಾನ ಆಗುತ್ತಿಲ್ಲ. ಬಡವರಿಗೆ ಮನೆ, ನಿವೇಶನ, ಪಡಿತರ ಚೀಟಿ ದೊರೆಯುತ್ತಿಲ್ಲ. ಸರ್ಕಾರ ತನ್ನ ಹೊಣೆಗಾರಿಕೆ ನಿರ್ವಹಿಸುತ್ತಿಲ್ಲ ಎಂದು ದೂರಿದರು.</p>.<p>ಉಳ್ಳಾಲದ ರಾಣಿ ಅಬ್ಬಕ್ಕನ ಬಗ್ಗೆ ಗೌರವವಿದ್ದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಡುಗಡೆ ಮಾಡಲಾದ ₹8 ಕೋಟಿ ವೆಚ್ಚದ ಭವನದ ಯೋಜನೆ ಕೈ ಗೆತ್ತಿಕೊಳ್ಳಲಿ. ಲೇಡಿಗೋಶನ್ ಆಸ್ಪತ್ರೆಯ ಹೆಸರು ಬದಲಾಯಿಸುವ ಬದಲು ಅಲ್ಲಿಗೆ ಇನ್ನಷ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸಲಿ ಎಂದು ಒತ್ತಾಯಿಸಿದರು.</p>.<p>ಬ್ಯಾರಿ ಭವನದ ನಿರ್ಮಾಣದ ವಿಚಾರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ ನಡೆಯುತ್ತಿದೆ. ಇದರಲ್ಲಿ ಕಾಂಗ್ರೆಸ್ ಪಾತ್ರ ಇಲ್ಲ ಎಂದರು.</p>.<p>ರಷ್ಯಾ- ಉಕ್ರೇನ್ನಲ್ಲಿ ಯುದ್ಧದ ವಾತಾವರಣ ಉಂಟಾದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಸಕಾಲದಲ್ಲಿ ಎಚ್ಚೆತ್ತುಕೊಳ್ಳದೆ ಇರುವುದರಿಂದ ಅಲ್ಲಿ ಕೆಲವು ಭಾರತೀಯರು ಆತಂಕದಲ್ಲಿ ಇರುವಂತಾಗಿದೆ ಎಂದು ತಿಳಿಸಿದರು.</p>.<p>ಕನ್ಯಾಡಿಯಲ್ಲಿ ಪರಿಶಿಷ್ಟ ಜಾತಿಯ ವ್ಯಕ್ತಿಯನ್ನು ಕೊಲೆ ಮಾಡಿರುವುದು ಖಂಡನೀಯ. ಈ ವಿಷಯದಲ್ಲಿ ಬಿಜೆಪಿ ಮೌನ ವಹಿಸಿರುವುದು ಏಕೆ? ಕೂಡಲೇ ಆ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಶಾಹುಲ್ ಹಮೀದ್, ಸಂತೋಷ್ ಕುಮಾರ್ ಶೆಟ್ಟಿ, ಜಕ್ರೀಯ, ಮುರಳಿ ನರಿಂಗಾನ, ಪಾಲಿಕೆ ಸದಸ್ಯ ಲತೀಫ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>