‘ಇಂತಹ ವಿಚಾರವನ್ನು ಸಂಸತ್ತಿನಲ್ಲಿ ಚರ್ಚಿಸಬೇಕು. ಜನರ ಮಧ್ಯೆ ವೈಮನಸ್ಸು ಹುಟ್ಟಿಸಲು ಚರ್ಚೆ ಹುಟ್ಟು ಹಾಕಬಾರದು. ಕಾನೂನು ತರುವ ಉದ್ದೇಶ ಇದ್ದರೆ, ಸಂಸತ್ತಿನ ಅಧಿವೇಶನ ಕರೆದು ಚರ್ಚಿಸಲಿ. ಎಲ್ಲ ಕಾನೂನು ಎಲ್ಲ ವರ್ಗದವರಿಗೂ ಅನ್ವಯ ಆಗಬೇಕು. ಅದಕ್ಕೆ ಯಾವುದೋ ಬೇರೆ ಭಾಷೆ ಹೆಸರು, ಕೆಲವೇ ಧರ್ಮವನ್ನು ಉದ್ದೇಶಿಸುವ ಅಗತ್ಯಗಳು ಇಲ್ಲ. ಕರ್ನಾಟಕದ ಕಾಯ್ದೆಗೆ ಅರೇಬಿಕ್ ಪದ ಇಡುವುದು ಯಾವ ದುರುದ್ದೇಶವನ್ನು ಹೊಂದಿದೆ? ಎಂದು ಅವರೇ ತಿಳಿಸಲಿ’ ಎಂದರು.