‘ರಾಜ್ಯ ಸರ್ಕಾರವು ತನ್ನ ಎಲ್ಲ ಹಂತಗಳ ವೈಫಲ್ಯ ಮುಚ್ಚಿಕೊಳ್ಳಲು, ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡಿಸಲು ಮುಂದಾಗಿದೆ. ಕೋವಿಡ್ ಪರಿಹಾರ, ಬಡವರಿಗೆ ಮನೆ, ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್, ರೇಷನ್ ಕಾರ್ಡ್ ಹೀಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿರುವ ಬಿಜೆಪಿ ಸರ್ಕಾರ, ಜನರ ಲಕ್ಷ್ಯವನ್ನು ಬೇರೆಡೆಗೆ ಸೆಳೆಯಲು ಈ ತಂತ್ರ ಬಳಸುತ್ತಿದೆ. ಬಲವಂತದ ಮತಾಂತರವನ್ನು ಯಾವ ಧರ್ಮವೂ ಬೆಂಬಲಿಸುವುದಿಲ್ಲ. ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸುತ್ತಿರುವ ಬಿಜೆಪಿ ಸಮಾಜಕ್ಕೆ ತಪ್ಪು ಸಂದೇಶ ನೀಡಿ, ಗೊಂದಲ ಸೃಷ್ಟಿಸುತ್ತಿದೆ’ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ನಝೀರ್ ಬಜಾಲ್ ಇದ್ದರು.