<p><strong>ಮಂಗಳೂರು:</strong> ರಫೇಲ್ ಒಪ್ಪಂದದ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಪ್ಪು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಪಲ್ಲಂ ರಾಜು ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಂಟಿ ಸಂಸದೀಯ ಸಮಿತಿಯಿಂದ ರಫೇಲ್ ಹಗರಣದ ಕುರಿತು ತನಿಖೆ ನಡೆಸಬೇಕು ಎನ್ನುವುದು ಕಾಂಗ್ರೆಸ್ನ ನಿಲುವಾಗಿದೆ ಎಂದರು.</p>.<p>ರಫೇಲ್ ಒಪ್ಪಂದ ದೇಶದ ರಕ್ಷಣಾ ವಿಭಾಗಕ್ಕೆ ಸಂಬಂಧಿಸಿದ ಅತ್ಯಂತ ದೊಡ್ಡ ಹಗರಣವಾಗಿದೆ. ದೇಶದ ರಕ್ಷಣಾ ವಿಭಾಗದ ವಿಮಾನ ತಯಾರಿಸುವ ಸಾಮರ್ಥ್ಯವನ್ನು ಎಚ್ಎಎಲ್ ಹೊಂದಿದ್ದು, 40 ವರ್ಷಗಳ ಅನುಭವವಿರುವ ಏಕೈಕ ಸಂಸ್ಥೆಯಾಗಿದೆ. ಈ ಒಪ್ಪಂದದಲ್ಲಿ ಎಚ್ಎಎಲ್ ಅನ್ನು ಬಿಟ್ಟು, ಇನ್ನೊಂದು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕಾರಣವೇನು ಎಂದು ಪ್ರಶ್ನಿಸಿದರು.</p>.<p>ಯುಪಿಎ ಸರ್ಕಾರ ಇರುವಾಗ ಮಾಡಿಕೊಂಡಿರುವ ಒಪ್ಪಂದವನ್ನು ಬದಲಾಯಿಸಿ, ರಿಲಾಯನ್ಸ್ ಡಿಫೆನ್ಸ್ ಲಿಮಿಟೆಡ್ ಜತೆಗೆ ಒಡಂಬಡಿಕೆ ಮಾಡಿಕೊಳ್ಳುವ ಅಗತ್ಯವೇನಿತ್ತು? ಖರೀದಿಸುವ ವಿಮಾನದ ಮೊತ್ತವನ್ನು ಮೂರು ಪಟ್ಟಿಗಿಂತಲೂ ಹೆಚ್ಚು ಮಾಡಲು ಏನು ಕಾರಣ ಎಂದು ಪ್ರಶ್ನಿಸಿದ ಅವರು, ದೇಶದ ಬೊಕ್ಕಸಕ್ಕೆ ₹41,205 ಕೋಟಿ ನಷ್ಟಕ್ಕೆ ಕಾರಣವಾಗಿರುವ ಈ ಹಗರಣವನ್ನು ದೇಶದ ಎದುರು ಬಹಿರಂಗಪಡಿಸುವ ಹೊಣೆಗಾರಿಕೆ ಪ್ರಧಾನಿ ಅವರ ಮೇಲಿದೆ ಎಂದು ಹೇಳಿದರು.</p>.<p>ಪ್ರಧಾನಿ ಮೋದಿ ಅವರು ಫ್ರಾನ್ಸ್ ಪ್ರವಾಸಕ್ಕೆ ತೆರಳುವವರೆಗೆ ರಫೇಲ್ ವಿಮಾನ ಖರೀದಿಯಲ್ಲಿ ಎಚ್ಎಎಲ್ನ ಹೆಸರಿತ್ತು. ಪ್ರವಾಸದ ನಂತರ ಈ ಪ್ರಸ್ತಾವ ಏಕಾಏಕಿ ಬದಲಾಗಿದ್ದು ಏಕೆ ಎನ್ನುವುದನ್ನು ಪ್ರಧಾನಿ ದೇಶದ ಜನರಿಗೆ ತಿಳಿಸಬೇಕು. ರಕ್ಷಣಾ ವಿಭಾಗದ ಖರೀದಿಗೆ ಸಂಬಂಧಿಸಿದಂತೆ ಡಿಪಿಎ ನಿಯಮಾವಳಿಯನ್ನು ಪ್ರಧಾನಿ ಉಲ್ಲಂಘಿಸಿದ್ದಾರೆ ಎಂದು ದೂರಿದರು.</p>.<p>ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೂ ತಪ್ಪು ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಸತ್ಯ ಸಂಗತಿಗಳನ್ನು ಮುಚ್ಚಿಡಲು ಪ್ರಯತ್ನಿಸಿದೆ. ಯುಪಿಎ ಅವಧಿಯಲ್ಲಿ ಒಂದು ವಿಮಾನ ಖರೀದಿಗೆ ₹526 ಕೋಟಿ ನಿಗದಿಯಾಗಿದ್ದು, ಇದೀಗ ಅದು ₹1,670 ಕೋಟಿಗೆ ಹೇಗೆ ಹೆಚ್ಚಿಸಲಾಯಿತು ಎಂಬುದರ ಕುರಿತು ಸುಪ್ರೀಂ ಕೋರ್ಟ್ಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಇಲ್ಲದಾಗಿದೆ. ಪ್ರತಿಪಕ್ಷಗಳ ಸದಸ್ಯರಿಗೂ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಆರೋಪಿಸಿದರು.</p>.<p>ಮಾಜಿ ಶಾಸಕ ಜೆ.ಆರ್. ಲೋಬೊ, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಕಳ್ಳಿಗೆ ತಾರಾನಾಥ ಶೆಟ್ಟಿ, ನವೀನ್ ಡಿಸೋಜ, ಟಿ.ಕೆ. ಸುಧೀರ್, ಸಲೀಂ, ಆರೀಫ್, ಸುಮಂತ್ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ರಫೇಲ್ ಒಪ್ಪಂದದ ಕುರಿತು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಪ್ಪು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಹಕ್ಕುಚ್ಯುತಿ ಮಂಡಿಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಪಲ್ಲಂ ರಾಜು ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಜಂಟಿ ಸಂಸದೀಯ ಸಮಿತಿಯಿಂದ ರಫೇಲ್ ಹಗರಣದ ಕುರಿತು ತನಿಖೆ ನಡೆಸಬೇಕು ಎನ್ನುವುದು ಕಾಂಗ್ರೆಸ್ನ ನಿಲುವಾಗಿದೆ ಎಂದರು.</p>.<p>ರಫೇಲ್ ಒಪ್ಪಂದ ದೇಶದ ರಕ್ಷಣಾ ವಿಭಾಗಕ್ಕೆ ಸಂಬಂಧಿಸಿದ ಅತ್ಯಂತ ದೊಡ್ಡ ಹಗರಣವಾಗಿದೆ. ದೇಶದ ರಕ್ಷಣಾ ವಿಭಾಗದ ವಿಮಾನ ತಯಾರಿಸುವ ಸಾಮರ್ಥ್ಯವನ್ನು ಎಚ್ಎಎಲ್ ಹೊಂದಿದ್ದು, 40 ವರ್ಷಗಳ ಅನುಭವವಿರುವ ಏಕೈಕ ಸಂಸ್ಥೆಯಾಗಿದೆ. ಈ ಒಪ್ಪಂದದಲ್ಲಿ ಎಚ್ಎಎಲ್ ಅನ್ನು ಬಿಟ್ಟು, ಇನ್ನೊಂದು ಖಾಸಗಿ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕಾರಣವೇನು ಎಂದು ಪ್ರಶ್ನಿಸಿದರು.</p>.<p>ಯುಪಿಎ ಸರ್ಕಾರ ಇರುವಾಗ ಮಾಡಿಕೊಂಡಿರುವ ಒಪ್ಪಂದವನ್ನು ಬದಲಾಯಿಸಿ, ರಿಲಾಯನ್ಸ್ ಡಿಫೆನ್ಸ್ ಲಿಮಿಟೆಡ್ ಜತೆಗೆ ಒಡಂಬಡಿಕೆ ಮಾಡಿಕೊಳ್ಳುವ ಅಗತ್ಯವೇನಿತ್ತು? ಖರೀದಿಸುವ ವಿಮಾನದ ಮೊತ್ತವನ್ನು ಮೂರು ಪಟ್ಟಿಗಿಂತಲೂ ಹೆಚ್ಚು ಮಾಡಲು ಏನು ಕಾರಣ ಎಂದು ಪ್ರಶ್ನಿಸಿದ ಅವರು, ದೇಶದ ಬೊಕ್ಕಸಕ್ಕೆ ₹41,205 ಕೋಟಿ ನಷ್ಟಕ್ಕೆ ಕಾರಣವಾಗಿರುವ ಈ ಹಗರಣವನ್ನು ದೇಶದ ಎದುರು ಬಹಿರಂಗಪಡಿಸುವ ಹೊಣೆಗಾರಿಕೆ ಪ್ರಧಾನಿ ಅವರ ಮೇಲಿದೆ ಎಂದು ಹೇಳಿದರು.</p>.<p>ಪ್ರಧಾನಿ ಮೋದಿ ಅವರು ಫ್ರಾನ್ಸ್ ಪ್ರವಾಸಕ್ಕೆ ತೆರಳುವವರೆಗೆ ರಫೇಲ್ ವಿಮಾನ ಖರೀದಿಯಲ್ಲಿ ಎಚ್ಎಎಲ್ನ ಹೆಸರಿತ್ತು. ಪ್ರವಾಸದ ನಂತರ ಈ ಪ್ರಸ್ತಾವ ಏಕಾಏಕಿ ಬದಲಾಗಿದ್ದು ಏಕೆ ಎನ್ನುವುದನ್ನು ಪ್ರಧಾನಿ ದೇಶದ ಜನರಿಗೆ ತಿಳಿಸಬೇಕು. ರಕ್ಷಣಾ ವಿಭಾಗದ ಖರೀದಿಗೆ ಸಂಬಂಧಿಸಿದಂತೆ ಡಿಪಿಎ ನಿಯಮಾವಳಿಯನ್ನು ಪ್ರಧಾನಿ ಉಲ್ಲಂಘಿಸಿದ್ದಾರೆ ಎಂದು ದೂರಿದರು.</p>.<p>ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೂ ತಪ್ಪು ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಸತ್ಯ ಸಂಗತಿಗಳನ್ನು ಮುಚ್ಚಿಡಲು ಪ್ರಯತ್ನಿಸಿದೆ. ಯುಪಿಎ ಅವಧಿಯಲ್ಲಿ ಒಂದು ವಿಮಾನ ಖರೀದಿಗೆ ₹526 ಕೋಟಿ ನಿಗದಿಯಾಗಿದ್ದು, ಇದೀಗ ಅದು ₹1,670 ಕೋಟಿಗೆ ಹೇಗೆ ಹೆಚ್ಚಿಸಲಾಯಿತು ಎಂಬುದರ ಕುರಿತು ಸುಪ್ರೀಂ ಕೋರ್ಟ್ಗೆ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಆಡಳಿತದಲ್ಲಿ ಪಾರದರ್ಶಕತೆ ಇಲ್ಲದಾಗಿದೆ. ಪ್ರತಿಪಕ್ಷಗಳ ಸದಸ್ಯರಿಗೂ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದು ಆರೋಪಿಸಿದರು.</p>.<p>ಮಾಜಿ ಶಾಸಕ ಜೆ.ಆರ್. ಲೋಬೊ, ಮುಡಾ ಅಧ್ಯಕ್ಷ ಸುರೇಶ್ ಬಳ್ಳಾಲ್, ಕಳ್ಳಿಗೆ ತಾರಾನಾಥ ಶೆಟ್ಟಿ, ನವೀನ್ ಡಿಸೋಜ, ಟಿ.ಕೆ. ಸುಧೀರ್, ಸಲೀಂ, ಆರೀಫ್, ಸುಮಂತ್ರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>