ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕಾಂಗ್ರೆಸ್‌ನಿಂದ ಪಕೋಡ ಮಾರಾಟ ಮಾಡಿ ಪ್ರತಿಭಟನೆ

Last Updated 18 ಸೆಪ್ಟೆಂಬರ್ 2021, 2:48 IST
ಅಕ್ಷರ ಗಾತ್ರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಯುವ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ರಸ್ತೆ ಬದಿಯಲ್ಲಿ ಪಕೋಡ ಮಾರಾಟ ಮಾಡಿ ಪ್ರತಿಭಟಿಸಲಾಯಿತು.

‘ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ದೇಶದಲ್ಲಿ ಯುವಜನರು ಉದ್ಯೋಗ ಕಳೆದುಕೊಂಡು ದಿಕ್ಕು ತೋಚದಂತಾಗಿದ್ದಾರೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮಾಜಿ ಸಚಿವ ಬಿ.ರಮಾನಾಥ ರೈ, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಮಾಜಿ ಶಾಸಕ ಮೊಯಿಯುದ್ದೀನ್ ಬಾವಾ, ಮಹಾನಗರ ಪಾಲಿಕೆ ಸದಸ್ಯರಾದ ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಪ್ರಮುಖರಾದ ಗಣೇಶ್ ಪೂಜಾರಿ, ಶಾಹುಲ್ ಹಮೀದ್, ಸುದರ್ಶನ್ ಜೈನ್, ಪ್ರಕಾಶ್ ಸಾಲ್ಯಾನ್, ಡಾ.ಶೇಖರ್ ಪೂಜಾರಿ, ಚಿತ್ತರಂಜನ್ ಶೆಟ್ಟಿ, ಶೋಭಾ ಪಡೀಲ್, ಶಕುಂತಲಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT