ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯು ಎರಡು ದಿನಗಳಿಂದ ಖಾಲಿ ಖಾಲಿಯಾಗಿದೆ. ಪೇಟೆಯಲ್ಲಿ ಯಾತ್ರಿಕರ ವಾಹನ ಓಡಾಟದ ಸಂಖ್ಯೆಯೂ ಇಳಿಮುಖಗೊಂಡಿದೆ. ವ್ಯಾಪಾರ ವ್ಯವಹಾರಗಳು ಇಳಿಮುಖ ಗೊಂಡಿವೆ ಎನ್ನುತ್ತಾರೆ ವ್ಯಾಪಾರಸ್ಥರು.