ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನಗರಕ್ಕೆ ನಿರಂತರ ನೀರು; ₹ 793 ಕೋಟಿ ಮೊತ್ತದ ಯೋಜನೆಗೆ ಸಿಎಂ ಚಾಲನೆ

Last Updated 12 ಆಗಸ್ಟ್ 2021, 9:04 IST
ಅಕ್ಷರ ಗಾತ್ರ

ಮಂಗಳೂರು: ನಗರ ನೀರು ಸರಬರಾಜು ಯೋಜನೆಗೆ ಎಡಿಬಿ ನೆರವಿನ 792.42ಕೋಟಿ ರೂಪಾಯಿ ವೆಚ್ಚದ 'ಕ್ವಿಮಿಪ್ ಜಲಸಿರಿ' ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಉದ್ಘಾಟಿಸಿದರು.

ಮಂಗಳೂರು ಮಾಹಾನಗರದ ಆರು ಲಕ್ಷ ಜನಸಂಖ್ಯೆ ಬಳಕೆಗೆ ಅಗತ್ಯವಾಗುವಂತೆ ಯೋಜನೆ ಸಿದ್ಧವಾಗುತ್ತಿದೆ. 8 ವರ್ಷಗಳ ಅವಧಿಗೆ ನಿರ್ವಹಣೆ ಹಾಗೂ ಕಾರ್ಯಾಚರಣೆ ವೆಚ್ಚ ₹204.75 ಕೋಟಿ ಆಗಿದ್ದು,ಮೆ. ಸುಯೇಜ್ ಪ್ರಾಜೆಕ್ಟ್ ಪ್ರೈ.ಲಿಹಾಗೂ ಡಿಆರ್‌ಎಸ್ ಇನ್ಫಾಟೆಕ್ಪ್ರೈ.ಲಿ. ಕಂಪನಿಗಳು₹ 587.67 ಕೋಟಿ ವೆಚ್ಚದಲ್ಲಿ ನಿರ್ಮಾಣದ ಹೊಣೆ ನಿರ್ವಹಿಸುತ್ತಿವೆ.

ಈ ಯೋಜನೆಯಲ್ಲಿ ಬಂಟ್ವಾಳ ತಾಲ್ಲೂಕಿನ ತುಂಬೆಯಲ್ಲಿ 81.7 ಎಂಎಲ್‌ಡಿಸಾಮರ್ಥ್ಯದ ಶುದ್ಧೀಕರಣ ಘಟಕ ಉನ್ನತೀಕರಣ, 23 ಮೇಲ್ಮಟ್ಟದ ಜಲಸಂಗ್ರಾಹಕ, 8 ಪಂಪಿಂಗ್ ಘಟಕಗಳು, 5 ನೆಲ ಹಂತದ ಸಂಗ್ರಹಗಾರ, 55 ಕಿ.ಮೀ. ಪಂಪಿಂಗ್ ಮುಖ್ಯ ಕೊಳವೆ ಅಳವಡಿಕೆಕಾಮಗಾರಿ, 1,500 ಕಿಮೀ ವಿತರಣಾ ಕೊಳವೆ, 86,300 ಗ್ರಾಹಕರ ಮಾಪಕ ಅಳವಡಿಸಲಾಗುತ್ತಿದೆ. ನಗರ ವ್ಯಾಪ್ತಿಯನ್ನು 54ವಲಯಗಳಾಗಿ ವಿಂಗಡಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಗ್ರಾಹಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT