ಮಂಗಳೂರಿಗೆ ಬಂದಿರುವ ಎನ್ಐಎ ಅಧಿಕಾರಿಗಳು, ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ ಮೊಹಮ್ಮದ್ ಶಾರಿಕ್ ವಿಚಾರಣೆ ಆರಂಭಿಸಿದ್ದಾರೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆರೋಪಿಯು ಚೇತರಿಸಿಕೊಳ್ಳುತ್ತಿದ್ದು, ಆತ ಗುಣಮುಖನಾದ ಮೇಲೆ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.