<p><strong>ಬಂಟ್ವಾಳ</strong>: ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಎಲ್ಲ ಸಹಕಾರಿ ಸಂಘಗಳ ಜೊತೆಗೆ ಅವಿನಾಭಾವ ಸಂಬಂಧ ಕಾಯ್ದುಕೊಳ್ಳುವುದರ ಮೂಲಕ ನಿಜವಾದ ಸಹಕಾರಿ ತತ್ವ ಅನುಸರಿಸುತ್ತಾ ತ್ವರಿತವಾಗಿ ಬೆಳೆದು ಬಂದಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರರ ಸಂಘದ ವತಿಯಿಂದ ನವೀಕೃತ ವಿಸ್ತೃತ ಶಾಖೆಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಶಾಖೆಗಳಲ್ಲಿ ಮಹಿಳಾ ಸಿಬ್ಬಂದಿ ಪ್ರಾಮಾಣಿಕ ಮತ್ತು ಗ್ರಾಹಕ ಸ್ನೇಹಿ ಸೇವೆ ನೀಡುತ್ತಿದ್ದಾರೆ. ಗರಿಷ್ಠ ಇ–ಸ್ಟ್ಯಾಂಪ್ ಸೌಲಭ್ಯ ನೀಡುವ ಮೂಲಕ ರಾಜ್ಯದಲ್ಲೇ ಸಂಸ್ಥೆ ಗುರುತಿಸಿಕೊಂಡಿದೆ ಎಂದರು.</p>.<p>ಮೂರ್ತೆದಾರರ ಮಹಾ ಮಂಡಲ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ್, ರಕ್ತೇಶ್ವರಿ ದೇವಳದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾದ ಸುಭಾಶ್ಚಂದ್ರ ಜೈನ್, ನಾಗೇಶ ಕಲ್ಲಡ್ಕ, ಜೀವನ್ ಎಲ್.ಪಿಂಟೊ ಮಾತನಾಡಿದರು.</p>.<p>ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಹಿರಿಯ ನಿರ್ದೇಶಕ ಸೀತಾರಾಮ ಪೂಜಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಟ್ವಾಳ</strong>: ಜಿಲ್ಲೆಯಲ್ಲಿ 33 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಎಲ್ಲ ಸಹಕಾರಿ ಸಂಘಗಳ ಜೊತೆಗೆ ಅವಿನಾಭಾವ ಸಂಬಂಧ ಕಾಯ್ದುಕೊಳ್ಳುವುದರ ಮೂಲಕ ನಿಜವಾದ ಸಹಕಾರಿ ತತ್ವ ಅನುಸರಿಸುತ್ತಾ ತ್ವರಿತವಾಗಿ ಬೆಳೆದು ಬಂದಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ರಮಾನಾಥ ರೈ ಹೇಳಿದರು.</p>.<p>ಇಲ್ಲಿನ ಬಿ.ಸಿ.ರೋಡಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರರ ಸಂಘದ ವತಿಯಿಂದ ನವೀಕೃತ ವಿಸ್ತೃತ ಶಾಖೆಯನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಶಾಖೆಗಳಲ್ಲಿ ಮಹಿಳಾ ಸಿಬ್ಬಂದಿ ಪ್ರಾಮಾಣಿಕ ಮತ್ತು ಗ್ರಾಹಕ ಸ್ನೇಹಿ ಸೇವೆ ನೀಡುತ್ತಿದ್ದಾರೆ. ಗರಿಷ್ಠ ಇ–ಸ್ಟ್ಯಾಂಪ್ ಸೌಲಭ್ಯ ನೀಡುವ ಮೂಲಕ ರಾಜ್ಯದಲ್ಲೇ ಸಂಸ್ಥೆ ಗುರುತಿಸಿಕೊಂಡಿದೆ ಎಂದರು.</p>.<p>ಮೂರ್ತೆದಾರರ ಮಹಾ ಮಂಡಲ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ಮುಖಂಡ ಕೆ.ಹರಿಕೃಷ್ಣ ಬಂಟ್ವಾಳ್, ರಕ್ತೇಶ್ವರಿ ದೇವಳದ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ವಿವಿಧ ಸಹಕಾರಿ ಸಂಘಗಳ ಅಧ್ಯಕ್ಷರಾದ ಸುಭಾಶ್ಚಂದ್ರ ಜೈನ್, ನಾಗೇಶ ಕಲ್ಲಡ್ಕ, ಜೀವನ್ ಎಲ್.ಪಿಂಟೊ ಮಾತನಾಡಿದರು.</p>.<p>ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಹಿರಿಯ ನಿರ್ದೇಶಕ ಸೀತಾರಾಮ ಪೂಜಾರಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>