<p><strong>ಮೂಡುಬಿದಿರೆ</strong>: ಸುದೀರ್ಘ ಇತಿಹಾಸವಿರುವ ಮತ್ತು ಸಹಕಾರಿಗಳಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸಹಕಾರಿ ಬ್ಯಾಂಕ್ಗಳು ಎಂದು ಮರುನಾಮಕರಣಗೊಳಿಸಬೇಕು. ಈ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರಿಗೆ ಮನವಿ ನೀಡಲಾಗಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.</p>.<p>ಇಲ್ಲಿನ ಎಂಸಿಎಸ್ ಸೊಸೈಟಿ ವತಿಯಿಂದ ಕಲ್ಪವೃಕ್ಷ ಸಭಾಭವನದಲ್ಲಿ ಏಳು ದಿನ ನಡೆಯುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೊಸೈಟಿಯ ನೂತನ ಋಣಪರಿಹಾರ ಯೋಜನೆಯ ನಿಬಂಧನೆ ಪತ್ರವನ್ನು ಅವರು ಬಿಡುಗಡೆ ಮಾಡಿದರು. ಸೊಸೈಟಿಯ ಹಿರಿಯ ಸದಸ್ಯರಾದ ಜಾರ್ಜ್ ಮೋನಿಸ್ ಅವರಿಗೆ ₹ 25 ಸಾವಿರ ನಗದಿನೊಂದಿಗೆ ಪ್ರಸಕ್ತ ಸಾಲಿನ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಡಲಾಯಿತು.</p>.<p>ಸಿ.ಎಚ್.ಅಬ್ದುಲ್ ಗಫೂರ್ ಮಾತನಾಡಿದರು. ಮೈಸೂರು ಧರ್ಮಪ್ರಾಂತದ ಬಿಷಪ್ ಫ್ರಾನ್ಸಿಸ್ ಸೆರಾವೊ ಮಾತನಾಡಿ, ಜಾತ್ಯತೀತ ಮತ್ತು ಪಕ್ಷಾತೀತ ನೆಲೆಯಲ್ಲಿ ಗ್ರಾಹಕರಿಗೆ ಒಳ್ಳೆಯ ಸೇವೆಯನ್ನು ನೀಡುತ್ತಿರುವ ಎಂಸಿಎಸ್ ಸೊಸೈಟಿ ಅಭಿನಂದನೆಗೆ ಅರ್ಹ ಎಂದರು.</p>.<p>ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಮಂದಿರ ಸಭಾದ ಅಧ್ಯಕ್ಷ ಅಭಯಚಂದ್ರ ಜೈನ್, ಧರ್ಮಗುರು ಒನಿಲ್ ಡಿಸೋಜ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು ಭಾಗವಹಿಸಿದ್ದರು.</p>.<p>ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ₹ 1 ಲಕ್ಷ ಮೊತ್ತದ ಚೆಕ್ನ್ನು ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸ್ವೀಕರಿಸಿದರು.</p>.<p>ಸಹಕಾರ ಶಿಕ್ಷಣ ನಿಧಿಗೆ ₹ 11ಲಕ್ಷ ಮೊತ್ತದ ಚೆಕ್ನ್ನು ಸಹಕಾರಿ ತರಬೇತಿ ಕೇಂದ್ರದ ಉಪನ್ಯಾಸಕಿ ಬಿಂದು ನಾಯರ್ ಮೂಲಕ ಹಸ್ತಾಂತರಿಸಲಾಯಿತು.</p>.<p>ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ. ಸ್ವಾಗತಿಸಿದರು. ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರು.ಸಿಇಒ ರಘುವೀರ್ ಕಾಮತ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡುಬಿದಿರೆ</strong>: ಸುದೀರ್ಘ ಇತಿಹಾಸವಿರುವ ಮತ್ತು ಸಹಕಾರಿಗಳಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸಹಕಾರಿ ಬ್ಯಾಂಕ್ಗಳು ಎಂದು ಮರುನಾಮಕರಣಗೊಳಿಸಬೇಕು. ಈ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರಿಗೆ ಮನವಿ ನೀಡಲಾಗಿದೆ ಎಂದು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.</p>.<p>ಇಲ್ಲಿನ ಎಂಸಿಎಸ್ ಸೊಸೈಟಿ ವತಿಯಿಂದ ಕಲ್ಪವೃಕ್ಷ ಸಭಾಭವನದಲ್ಲಿ ಏಳು ದಿನ ನಡೆಯುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸೊಸೈಟಿಯ ನೂತನ ಋಣಪರಿಹಾರ ಯೋಜನೆಯ ನಿಬಂಧನೆ ಪತ್ರವನ್ನು ಅವರು ಬಿಡುಗಡೆ ಮಾಡಿದರು. ಸೊಸೈಟಿಯ ಹಿರಿಯ ಸದಸ್ಯರಾದ ಜಾರ್ಜ್ ಮೋನಿಸ್ ಅವರಿಗೆ ₹ 25 ಸಾವಿರ ನಗದಿನೊಂದಿಗೆ ಪ್ರಸಕ್ತ ಸಾಲಿನ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಡಲಾಯಿತು.</p>.<p>ಸಿ.ಎಚ್.ಅಬ್ದುಲ್ ಗಫೂರ್ ಮಾತನಾಡಿದರು. ಮೈಸೂರು ಧರ್ಮಪ್ರಾಂತದ ಬಿಷಪ್ ಫ್ರಾನ್ಸಿಸ್ ಸೆರಾವೊ ಮಾತನಾಡಿ, ಜಾತ್ಯತೀತ ಮತ್ತು ಪಕ್ಷಾತೀತ ನೆಲೆಯಲ್ಲಿ ಗ್ರಾಹಕರಿಗೆ ಒಳ್ಳೆಯ ಸೇವೆಯನ್ನು ನೀಡುತ್ತಿರುವ ಎಂಸಿಎಸ್ ಸೊಸೈಟಿ ಅಭಿನಂದನೆಗೆ ಅರ್ಹ ಎಂದರು.</p>.<p>ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಮಂದಿರ ಸಭಾದ ಅಧ್ಯಕ್ಷ ಅಭಯಚಂದ್ರ ಜೈನ್, ಧರ್ಮಗುರು ಒನಿಲ್ ಡಿಸೋಜ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು ಭಾಗವಹಿಸಿದ್ದರು.</p>.<p>ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ₹ 1 ಲಕ್ಷ ಮೊತ್ತದ ಚೆಕ್ನ್ನು ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸ್ವೀಕರಿಸಿದರು.</p>.<p>ಸಹಕಾರ ಶಿಕ್ಷಣ ನಿಧಿಗೆ ₹ 11ಲಕ್ಷ ಮೊತ್ತದ ಚೆಕ್ನ್ನು ಸಹಕಾರಿ ತರಬೇತಿ ಕೇಂದ್ರದ ಉಪನ್ಯಾಸಕಿ ಬಿಂದು ನಾಯರ್ ಮೂಲಕ ಹಸ್ತಾಂತರಿಸಲಾಯಿತು.</p>.<p>ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ. ಸ್ವಾಗತಿಸಿದರು. ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರು.ಸಿಇಒ ರಘುವೀರ್ ಕಾಮತ್ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>