ಈ ಜನಜಾಗೃತಿ ಯಕ್ಷಗಾನ ತಾಳಮದ್ದಳೆಯಲ್ಲಿ ಹಿರಿಯ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಷಿ, ಅರ್ಥದಾರಿ ಭಾಸ್ಕರ ರೈ ಕುಕ್ಕುವಳ್ಳಿ, ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಪ್ರಮುಖ ಪಾತ್ರವಹಿಸಿದ್ದಾರೆ. ಡಾ.ದಿನಕರ ಎಸ್. ಪಚ್ಚನಾಡಿ, ಸದಾಶಿವ ಆಳ್ವ ತಲಪಾಡಿ, ವಿದ್ಯಾಧರ ಶೆಟ್ಟಿ, ಪ್ರಶಾಂತ ಸಿ.ಕೆ. ಅವರೂ ಅರ್ಥಧಾರಿಗಳಾಗಿದ್ದಾರೆ. ಹಿಮ್ಮೇಳದಲ್ಲಿ ಭಾಗವತರಾಗಿ ದೇವಿಪ್ರಸಾದ ಆಳ್ವ ತಲಪಾಡಿ ಹಾಗೂ ಚೆಂಡೆ-ಮದ್ದಳೆಯಲ್ಲಿ ರೋಹಿತ್ ಉಚ್ಚಿಲ್ ಮತ್ತು ರಾಜೇಶ್ ಜೆಪ್ಪು ಕುಡುಪಾಡಿ ಸಹಕರಿಸಿದ್ದಾರೆ. ಶಿವಶಂಕರ್ ಮತ್ತು ಧನುಷ್ ಪೊಸಕುರಲ್ ಚಿತ್ರೀಕರಣ, ಕೃತಿ ಸೌಂಡ್ಸ್ನ ಎಡ್ವರ್ಡ್ ಲೋಬೋ ತೊಕ್ಕೊಟ್ಟು ಧ್ವನಿ-ಬೆಳಕು ನೀಡಿದ್ದು, ಸ್ಥಳಾವಕಾಶವನ್ನು ಕುಂಪಲ ಬಾಲಕೃಷ್ಣ ಮಂದಿರದವರು ನೀಡಿದ್ದಾರೆ.