<p><strong>ಮಂಗಳೂರು:</strong> ಹೊರ ರಾಜ್ಯಗಳಿಂದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವವರಿಗೆ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳ ಮೂಲಕ ಕ್ವಾರಂಟೈನ್ ನಿರ್ವಹಣೆ ಮಾಡಲಾಗುತ್ತಿದೆ.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ಥಳೀಯ ಶಾಸಕ ಯು.ಟಿ.ಖಾದರ್, ‘ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಇಲ್ಲದೇ ಮನೆಗೆ ಕಳುಹಿಸುವುದರಿಂದ ಸೋಂಕು ಹರಡುವ ಅಪಾಯವಿದೆ. ಅಲ್ಲದೇ, ಹೊರಗಿನಿಂದ ಬಂದವರನ್ನು ಅನು<br />ಮಾನದಿಂದ ನೋಡುವ, ದೂರ ಇಡುವ ಮತ್ತು ವೈಮನಸ್ಸು ಸೃಷ್ಟಿಸುವುದಕ್ಕೂ ಕಾರಣವಾಗಬಹುದು. ಇದೆಲ್ಲವನ್ನೂ ತಡೆಯಲು ಸ್ಥಳೀಯವಾಗಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>ನೋಡಲ್ ಅಧಿಕಾರಿ ನೇಮಕ: ಬೆಳ್ಮ ಗ್ರಾಮ ಪಂಚಾಯಿತಿಯನ್ನು ಕ್ವಾರಂಟೈನ್ ಸೌಲಭ್ಯದ ನೋಡಲ್ ಗ್ರಾಮ ಪಂಚಾಯಿತಿಯನ್ನಾಗಿ ಆಯ್ಕೆ ಮಾಡಲಾಗಿದೆ. ಅಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.</p>.<p>‘ನಮ್ಮ ಕ್ಷೇತ್ರಕ್ಕೆ ಯಾವುದೇ ರಾಜ್ಯದಲ್ಲಿರುವವರೂ ವಾಪಸ್ ಬರಬಹುದು. ಯಾರನ್ನೂ ನಾವು ತಡೆಯುವುದಿಲ್ಲ. ಕ್ಷೇತ್ರಕ್ಕೆ ಬಂದವರು ಬೆಳ್ಮಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬೇಕು. ಅವರು ಸೂಚಿಸುವ ಸರ್ಕಾರಿ ವಿದ್ಯಾರ್ಥಿ ವಸತಿ ನಿಯಲ ಅಥವಾ ಶಾಲೆಯಲ್ಲಿ ಏಳುದಿನಗಳ ಕಾಲ ಇರಬೇಕು. ಈ ಕೇಂದ್ರಗಳಲ್ಲಿ ಕನಿಷ್ಠ ಸೌಲಭ್ಯಒದಗಿಸಲಾಗಿದೆ. ಕ್ವಾರಂಟೈನ್ನಲ್ಲಿ ಇರುವವರಿಗೆ ಅವರ ಮನೆಯವರೇ ಊಟ ಪೂರೈಸಬೇಕು’ ಎಂದು ಖಾದರ್ ಹೇಳಿದರು.</p>.<p><strong>ಎಲ್ಲಿವೆ ಸೌಲಭ್ಯ?:</strong> ‘ಕ್ವಾರಂಟೈನ್ಗೆ 10,000 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಕ್ವಾರಂಟೈನ್ಗಾಗಿ ರೈಲುಗಳನ್ನೂ ಪರಿವರ್ತನೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಈಗ ಕ್ವಾರಂಟೈನ್ಇಲ್ಲ ಎನ್ನುತ್ತಿದ್ದಾರೆ. ಆ ಸೌಲಭ್ಯಗಳು ಏನಾದವು’ ಎಂದು ಶಾಸಕರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಹೊರ ರಾಜ್ಯಗಳಿಂದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವವರಿಗೆ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಗಳ ಮೂಲಕ ಕ್ವಾರಂಟೈನ್ ನಿರ್ವಹಣೆ ಮಾಡಲಾಗುತ್ತಿದೆ.</p>.<p>ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ಥಳೀಯ ಶಾಸಕ ಯು.ಟಿ.ಖಾದರ್, ‘ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಇಲ್ಲದೇ ಮನೆಗೆ ಕಳುಹಿಸುವುದರಿಂದ ಸೋಂಕು ಹರಡುವ ಅಪಾಯವಿದೆ. ಅಲ್ಲದೇ, ಹೊರಗಿನಿಂದ ಬಂದವರನ್ನು ಅನು<br />ಮಾನದಿಂದ ನೋಡುವ, ದೂರ ಇಡುವ ಮತ್ತು ವೈಮನಸ್ಸು ಸೃಷ್ಟಿಸುವುದಕ್ಕೂ ಕಾರಣವಾಗಬಹುದು. ಇದೆಲ್ಲವನ್ನೂ ತಡೆಯಲು ಸ್ಥಳೀಯವಾಗಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ’ ಎಂದರು.</p>.<p>ನೋಡಲ್ ಅಧಿಕಾರಿ ನೇಮಕ: ಬೆಳ್ಮ ಗ್ರಾಮ ಪಂಚಾಯಿತಿಯನ್ನು ಕ್ವಾರಂಟೈನ್ ಸೌಲಭ್ಯದ ನೋಡಲ್ ಗ್ರಾಮ ಪಂಚಾಯಿತಿಯನ್ನಾಗಿ ಆಯ್ಕೆ ಮಾಡಲಾಗಿದೆ. ಅಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದರು.</p>.<p>‘ನಮ್ಮ ಕ್ಷೇತ್ರಕ್ಕೆ ಯಾವುದೇ ರಾಜ್ಯದಲ್ಲಿರುವವರೂ ವಾಪಸ್ ಬರಬಹುದು. ಯಾರನ್ನೂ ನಾವು ತಡೆಯುವುದಿಲ್ಲ. ಕ್ಷೇತ್ರಕ್ಕೆ ಬಂದವರು ಬೆಳ್ಮಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯನ್ನು ಸಂಪರ್ಕಿಸಬೇಕು. ಅವರು ಸೂಚಿಸುವ ಸರ್ಕಾರಿ ವಿದ್ಯಾರ್ಥಿ ವಸತಿ ನಿಯಲ ಅಥವಾ ಶಾಲೆಯಲ್ಲಿ ಏಳುದಿನಗಳ ಕಾಲ ಇರಬೇಕು. ಈ ಕೇಂದ್ರಗಳಲ್ಲಿ ಕನಿಷ್ಠ ಸೌಲಭ್ಯಒದಗಿಸಲಾಗಿದೆ. ಕ್ವಾರಂಟೈನ್ನಲ್ಲಿ ಇರುವವರಿಗೆ ಅವರ ಮನೆಯವರೇ ಊಟ ಪೂರೈಸಬೇಕು’ ಎಂದು ಖಾದರ್ ಹೇಳಿದರು.</p>.<p><strong>ಎಲ್ಲಿವೆ ಸೌಲಭ್ಯ?:</strong> ‘ಕ್ವಾರಂಟೈನ್ಗೆ 10,000 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಕ್ವಾರಂಟೈನ್ಗಾಗಿ ರೈಲುಗಳನ್ನೂ ಪರಿವರ್ತನೆ ಮಾಡಿರುವುದಾಗಿ ಕೇಂದ್ರ ಸರ್ಕಾರ ಪ್ರಕಟಿಸಿತ್ತು. ಈಗ ಕ್ವಾರಂಟೈನ್ಇಲ್ಲ ಎನ್ನುತ್ತಿದ್ದಾರೆ. ಆ ಸೌಲಭ್ಯಗಳು ಏನಾದವು’ ಎಂದು ಶಾಸಕರು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>