ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸ್ಥಳೀಯ ಶಾಸಕ ಯು.ಟಿ.ಖಾದರ್, ‘ಹೊರ ರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಇಲ್ಲದೇ ಮನೆಗೆ ಕಳುಹಿಸುವುದರಿಂದ ಸೋಂಕು ಹರಡುವ ಅಪಾಯವಿದೆ. ಅಲ್ಲದೇ, ಹೊರಗಿನಿಂದ ಬಂದವರನ್ನು ಅನು
ಮಾನದಿಂದ ನೋಡುವ, ದೂರ ಇಡುವ ಮತ್ತು ವೈಮನಸ್ಸು ಸೃಷ್ಟಿಸುವುದಕ್ಕೂ ಕಾರಣವಾಗಬಹುದು. ಇದೆಲ್ಲವನ್ನೂ ತಡೆಯಲು ಸ್ಥಳೀಯವಾಗಿ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ’ ಎಂದರು.