‘ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಮಾತ್ರ ಕೊರೊನಾ ವೈರಸ್ ಸೋಂಕು ತಡೆಯಲು ಸಾಧ್ಯ. ಈ ಕಾರಣದಿಂದ ಜಿಲ್ಲೆಯನ್ನು ಸಂಪೂರ್ಣವಾಗಿ ಬಂದ್ ಮಾಡುವುದು ಅನಿವಾರ್ಯ. ಹಾಲು ಪೂರೈಕೆ, ದಿನಪತ್ರಿಕೆಗಳ ವಿತರಣೆ, ಆಸ್ಪತ್ರೆಗಳು ಮತ್ತು ಔಷಧಿ ಅಂಗಡಿಗಳನ್ನು ತೆರೆದಿಡಲು ಈ ಅವಧಿಯಲ್ಲಿ ಅವಕಾಶ ಕಲ್ಪಿಸಲಾಗುವುದು’ ಎಂದು ಸಚಿವರು ತಿಳಿಸಿದರು.