ವಿದೇಶದಲ್ಲಿ ಸಿಲುಕಿರುವವರನ್ನು ಕರೆತರುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸರಿಯಾದ ಸಿದ್ಧತೆ ಮಾಡಿಕೊಂಡಿಲ್ಲ. ರಾಜ್ಯಕ್ಕೆ 12,000 ಜನರು ಮರಳುತ್ತಾರೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಆದರೆ, ಸಚಿವ ಸುರೇಶ್ಕುಮಾರ್ ಅವರು 10,823 ಮಂದಿ ಮಾತ್ರ ಮರಳುತ್ತಾರೆ ಎಂದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ 4,000 ಮಂದಿ ಬರಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಎಷ್ಟು ಜನರನ್ನು ಕರೆತರಲಾಗುತ್ತಿದೆ? ಅವರನ್ನು ಯಾವ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಗುತ್ತಿದೆ ಎಂಬ ಸ್ಪಷ್ಟತೆ ಸರ್ಕಾರದಲ್ಲಿ ಇಲ್ಲ ಎಂದು ಮೋಹನ್ ಟೀಕಿಸಿದ್ದಾರೆ.