ಮಂಗಳೂರು: ‘ರಾಜ್ಯದಲ್ಲಿ ಮುಖ್ಯಮಂತ್ರಿ ಆಗುವ ಸಾಧ್ಯತೆ ಇರುವ ವರ್ಚಸ್ವೀ ನಾಯಕರಾದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ, ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ಅವರು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಜನಜಾಗೃತಿ ನಡೆಸಲಿದ್ದೇವೆ’ ಎಂದು ಸುದ್ದಿ ಜನಾಂದೋಲನ ವೇದಿಕೆಯ ಡಾ.ಯು.ಪಿ.ಶಿವಾನಂದ ಹೇಳಿದರು.