<p><strong>ಮಂಗಳೂರು: </strong>ಜಾಗ ಮಾರಾಟಕ್ಕೆ ಸಂಬಂಧಿಸಿ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು ಲಂಚ ಪಡೆದ ಆರೋಪದ ಮೇರೆಗೆ ಮಂಗಳೂರು ತಹಶೀಲ್ದಾರ್ ಪುರಂದರ ಹಾಗೂ ಕಚೇರಿಯ ಪ್ರಥಮ ದರ್ಜೆ ಸಹಾಯಕ ಶಿವಾನಂದ ನಾಟ್ಯಾಕರ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ನಗರದ ಕಾವೂರು ನಿವಾಸಿಯೊಬ್ಬರು ಜಾಗ ಮಾರಾಟಕ್ಕೆ ಎನ್ಓಸಿ ನೀಡುವಂತೆ ತಹಶೀಲ್ದಾರ್ಗೆ ಮೂರು ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ‘ಕೆಲಸ ಮಾಡಿಕೊಡಬೇಕಾದರೆ ತನಗೆ ಹಾಗೂ ತಹಶೀಲ್ದಾರ್ಗೆ ಲಂಚ ಕೊಡಬೇಕು ಎಂದು ಶಿವಾನಂದ ಬೇಡಿಕೆ ಇಟ್ಟಿದ್ದಾರೆ‘ ಎಂಬುದಾಗಿ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಅರ್ಜಿದಾರರಿಂದ ₹ 4,700 ಲಂಚದ ಹಣ ಪಡೆದ ಶಿವಾನಂದ ಅವರನ್ನು ಬಂಧಿಸಿದ್ದೇವೆ. ಲಂಚದ ಹಣದಲ್ಲಿ ತಹಶೀಲ್ದಾರ್ ಅವರಿಗೂ ಪಾಲು ಇತ್ತು. ಹಾಗಾಗಿ ತಹಶೀಲ್ದಾರ್ ಪುರಂದರ ಅವರನ್ನೂ ಬಂಧಿಸಿದ್ದೇವೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಬಂಧಿತರನ್ನು ಕೋರ್ಟ್ಗೆ ಹಾಜರುಪಡಿಸಿದ್ದೇವೆ. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದ್ದಾರೆ. ಪುರಂದರ, ವಿಜಯಪುರ ಜಿಲ್ಲೆ ಗುಣಕಿ ಗ್ರಾಮದವರು. ಶಿವಾನಂದ ಬಂಟ್ವಾಳ ತಾಲ್ಲೂಕಿನ ಬಿ.ಮೂಡಾ ಗ್ರಾಮದವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಜಾಗ ಮಾರಾಟಕ್ಕೆ ಸಂಬಂಧಿಸಿ ನಿರಾಕ್ಷೇಪಣಾ ಪತ್ರ (ಎನ್ಒಸಿ) ನೀಡಲು ಲಂಚ ಪಡೆದ ಆರೋಪದ ಮೇರೆಗೆ ಮಂಗಳೂರು ತಹಶೀಲ್ದಾರ್ ಪುರಂದರ ಹಾಗೂ ಕಚೇರಿಯ ಪ್ರಥಮ ದರ್ಜೆ ಸಹಾಯಕ ಶಿವಾನಂದ ನಾಟ್ಯಾಕರ್ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.</p>.<p>ನಗರದ ಕಾವೂರು ನಿವಾಸಿಯೊಬ್ಬರು ಜಾಗ ಮಾರಾಟಕ್ಕೆ ಎನ್ಓಸಿ ನೀಡುವಂತೆ ತಹಶೀಲ್ದಾರ್ಗೆ ಮೂರು ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ‘ಕೆಲಸ ಮಾಡಿಕೊಡಬೇಕಾದರೆ ತನಗೆ ಹಾಗೂ ತಹಶೀಲ್ದಾರ್ಗೆ ಲಂಚ ಕೊಡಬೇಕು ಎಂದು ಶಿವಾನಂದ ಬೇಡಿಕೆ ಇಟ್ಟಿದ್ದಾರೆ‘ ಎಂಬುದಾಗಿ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.</p>.<p>‘ಅರ್ಜಿದಾರರಿಂದ ₹ 4,700 ಲಂಚದ ಹಣ ಪಡೆದ ಶಿವಾನಂದ ಅವರನ್ನು ಬಂಧಿಸಿದ್ದೇವೆ. ಲಂಚದ ಹಣದಲ್ಲಿ ತಹಶೀಲ್ದಾರ್ ಅವರಿಗೂ ಪಾಲು ಇತ್ತು. ಹಾಗಾಗಿ ತಹಶೀಲ್ದಾರ್ ಪುರಂದರ ಅವರನ್ನೂ ಬಂಧಿಸಿದ್ದೇವೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.</p>.<p>‘ಬಂಧಿತರನ್ನು ಕೋರ್ಟ್ಗೆ ಹಾಜರುಪಡಿಸಿದ್ದೇವೆ. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ತಿಳಿಸಿದ್ದಾರೆ. ಪುರಂದರ, ವಿಜಯಪುರ ಜಿಲ್ಲೆ ಗುಣಕಿ ಗ್ರಾಮದವರು. ಶಿವಾನಂದ ಬಂಟ್ವಾಳ ತಾಲ್ಲೂಕಿನ ಬಿ.ಮೂಡಾ ಗ್ರಾಮದವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>