ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ: ತಹಶೀಲ್ದಾರ್‌ ಪುರಂದರ ಬಂಧನ

Last Updated 30 ಸೆಪ್ಟೆಂಬರ್ 2022, 20:07 IST
ಅಕ್ಷರ ಗಾತ್ರ

ಮಂಗಳೂರು: ಜಾಗ ಮಾರಾಟಕ್ಕೆ ಸಂಬಂಧಿಸಿ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ಲಂಚ ಪಡೆದ ಆರೋಪದ ಮೇರೆಗೆ ಮಂಗಳೂರು ತಹಶೀಲ್ದಾರ್‌ ಪುರಂದರ ಹಾಗೂ ಕಚೇರಿಯ ಪ್ರಥಮ ದರ್ಜೆ ಸಹಾಯಕ ಶಿವಾನಂದ ನಾಟ್ಯಾಕರ್‌ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ನಗರದ ಕಾವೂರು ನಿವಾಸಿಯೊಬ್ಬರು ಜಾಗ ಮಾರಾಟಕ್ಕೆ ಎನ್ಓಸಿ ನೀಡುವಂತೆ ತಹಶೀಲ್ದಾರ್‌ಗೆ ಮೂರು ತಿಂಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ‘ಕೆಲಸ ಮಾಡಿಕೊಡಬೇಕಾದರೆ ತನಗೆ ಹಾಗೂ ತಹಶೀಲ್ದಾರ್‌ಗೆ ಲಂಚ ಕೊಡಬೇಕು ಎಂದು ಶಿವಾನಂದ ಬೇಡಿಕೆ ಇಟ್ಟಿದ್ದಾರೆ‘ ಎಂಬುದಾಗಿ ಅರ್ಜಿದಾರರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ಅರ್ಜಿದಾರರಿಂದ ₹ 4,700 ಲಂಚದ ಹಣ ಪಡೆದ ಶಿವಾನಂದ ಅವರನ್ನು ಬಂಧಿಸಿದ್ದೇವೆ. ಲಂಚದ ಹಣದಲ್ಲಿ ತಹಶೀಲ್ದಾರ್ ಅವರಿಗೂ ಪಾಲು ಇತ್ತು. ಹಾಗಾಗಿ ತಹಶೀಲ್ದಾರ್‌ ಪುರಂದರ ಅವರನ್ನೂ ಬಂಧಿಸಿದ್ದೇವೆ’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

‘ಬಂಧಿತರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದೇವೆ. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್‌ ತಿಳಿಸಿದ್ದಾರೆ. ಪುರಂದರ, ವಿಜಯಪುರ ಜಿಲ್ಲೆ ಗುಣಕಿ ಗ್ರಾಮದವರು. ಶಿವಾನಂದ ಬಂಟ್ವಾಳ ತಾಲ್ಲೂಕಿನ ಬಿ.ಮೂಡಾ ಗ್ರಾಮದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT