<p><strong>ಮಂಗಳೂರು:</strong> ಧರ್ಮಸ್ಥಳದ ಬೆಳವಣಿಗೆಗೆ ಸಂಬಂಧಿಸಿ ನ್ಯಾಯಾಧೀಶರ ಎದುರು ಸಾಕ್ಷಿ ದೂರುದಾರನ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಗುರುವಾರ ಮುಂದುವರಿಯಲಿದೆ.</p>.<p>‘ಹೇಳಿಕೆ ದಾಖಲು ಪ್ರಕ್ರಿಯೆ ಮಂಗಳವಾರ ಪೂರ್ಣಗೊಂಡಿಲ್ಲ. ಆತನನ್ನು ಗುರುವಾರ ಬೆಳ್ತಂಗಡಿಯ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗುವುದು’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. </p>.<p>ಈ ಪ್ರಕರಣದಲ್ಲಿ ಇತರರು ನೀಡಿರುವ ಹೇಳಿಕೆಯನ್ನು ದಾಖಲೀಕರಣ ಪ್ರಕ್ರಿಯೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ಬುಧವಾರವೂ ಮುಂದುವರಿಯಿತು.</p>.<p><strong>ಜಾಮೀನು ಅರ್ಜಿ ವಿಚಾರಣೆ 27ರಂದು:</strong></p>.<p>ಮನೆಯಲ್ಲಿ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಜಾಮೀನು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ವಿಚಾರಣೆ ಇದೇ 27ರಂದು ನಿಗದಿಯಾಗಿದೆ. </p>.<p>ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ. ಆದೇಶದ ಪ್ರತಿಯನ್ನು ಇನ್ನೂ ತಿಮರೋಡಿ ಅವರಿಗೆ ತಲುಪಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ.</p>.<p>‘ತಿಮರೋಡಿ ಅವರು ಮನೆಯಲ್ಲೂ ಇಲ್ಲ, ಕಚೇರಿಯಲ್ಲೂ ಇಲ್ಲ. ಹಾಗಾಗಿ ಗಡಿಪಾರು ಆದೇಶ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಅವರಿಗಾಗಿ ಹುಡುಕಾಟ ನಡೆಸಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಧರ್ಮಸ್ಥಳದ ಬೆಳವಣಿಗೆಗೆ ಸಂಬಂಧಿಸಿ ನ್ಯಾಯಾಧೀಶರ ಎದುರು ಸಾಕ್ಷಿ ದೂರುದಾರನ ಹೇಳಿಕೆ ದಾಖಲಿಸುವ ಪ್ರಕ್ರಿಯೆ ಗುರುವಾರ ಮುಂದುವರಿಯಲಿದೆ.</p>.<p>‘ಹೇಳಿಕೆ ದಾಖಲು ಪ್ರಕ್ರಿಯೆ ಮಂಗಳವಾರ ಪೂರ್ಣಗೊಂಡಿಲ್ಲ. ಆತನನ್ನು ಗುರುವಾರ ಬೆಳ್ತಂಗಡಿಯ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗುವುದು’ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. </p>.<p>ಈ ಪ್ರಕರಣದಲ್ಲಿ ಇತರರು ನೀಡಿರುವ ಹೇಳಿಕೆಯನ್ನು ದಾಖಲೀಕರಣ ಪ್ರಕ್ರಿಯೆ ಬೆಳ್ತಂಗಡಿಯ ಎಸ್ಐಟಿ ಕಚೇರಿಯಲ್ಲಿ ಬುಧವಾರವೂ ಮುಂದುವರಿಯಿತು.</p>.<p><strong>ಜಾಮೀನು ಅರ್ಜಿ ವಿಚಾರಣೆ 27ರಂದು:</strong></p>.<p>ಮನೆಯಲ್ಲಿ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಜಾಮೀನು ಕೋರಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲರು ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತ ವಿಚಾರಣೆ ಇದೇ 27ರಂದು ನಿಗದಿಯಾಗಿದೆ. </p>.<p>ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಮಾಡಿದ್ದಾರೆ. ಆದೇಶದ ಪ್ರತಿಯನ್ನು ಇನ್ನೂ ತಿಮರೋಡಿ ಅವರಿಗೆ ತಲುಪಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ.</p>.<p>‘ತಿಮರೋಡಿ ಅವರು ಮನೆಯಲ್ಲೂ ಇಲ್ಲ, ಕಚೇರಿಯಲ್ಲೂ ಇಲ್ಲ. ಹಾಗಾಗಿ ಗಡಿಪಾರು ಆದೇಶ ಜಾರಿಗೊಳಿಸಲು ಸಾಧ್ಯವಾಗಿಲ್ಲ. ಅವರಿಗಾಗಿ ಹುಡುಕಾಟ ನಡೆಸಿದ್ದೇವೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>