<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಗರಿಷ್ಠ 147 ಮಂದಿಗೆ ಕೋವಿಡ್–19 ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,242ಕ್ಕೆ ಏರಿದೆ.</p>.<p>ಭಾನುವಾರ ಸೋಂಕು ದೃಢಪಟ್ಟಿರುವ 147 ಮಂದಿಯ ಪೈಕಿ, 35 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. ಇನ್ನು ಐಎಲ್ಐನ 40 ಹಾಗೂ ಎಸ್ಎಆರ್ಐನ 2 ಪ್ರಕರಣಗಳು ವರದಿಯಾಗಿವೆ. ರ್ಯಾಂಡಮ್ ತಪಾಸಣೆಯಲ್ಲಿ 48 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಶಸ್ತ್ರಚಿಕಿತ್ಸೆಗೆ ಬಂದಿದ್ದ ಐವರಲ್ಲಿ ಹಾಗೂ ಹಡಗಿನ ಮೂಲಕ ಮಲೇಷ್ಯಾ ಪ್ರವಾಸ ಮಾಡಿದ್ದ ಇಬ್ಬರಿಗೆ ಕೋವಿಡ್–19 ತಗಲಿದೆ.</p>.<p><strong>ಐಸಿಯು ಚಿಕಿತ್ಸೆ ಹೆಚ್ಚಳ: </strong>ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 10ಕ್ಕೆ ಏರಿದೆ. 57 ಹಾಗೂ 50 ವರ್ಷದ ಮಹಿಳೆಯರಿಗೆ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>86, 84, 64 ವರ್ಷದ ವೃದ್ಧೆಯರು, 72, 65 ವರ್ಷದ ವೃದ್ಧರು, 52 ವರ್ಷದ ಇಬ್ಬರು ಪುರುಷರು, 31 ವರ್ಷದ ವ್ಯಕ್ತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.</p>.<p>38 ಮಂದಿ ಗುಣಮುಖ: ಜಿಲ್ಲೆಯಲ್ಲಿ ಒಟ್ಟು 38 ಮಂದಿ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.</p>.<p>2 ವರ್ಷದ ಗಂಡು ಮಗು, 6 ವರ್ಷದ ಇಬ್ಬರು ಬಾಲಕರು, 15 ಮತ್ತು 17 ವರ್ಷದ ಬಾಲಕಿಯರು, 80, 65, 62, 60 ವರ್ಷದ ವೃದ್ಧರು ಗುಣಮುಖರಾದವರಲ್ಲಿ ಸೇರಿದ್ದಾರೆ.</p>.<p class="Briefhead"><strong>ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ</strong></p>.<p>ರಾಜ್ಯ ಸರ್ಕಾರದ ಸುತ್ತೋಲೆಯಂತೆ ರೋಗ ಲಕ್ಷಣ ಇಲ್ಲದ ಕೋವಿಡ್–19 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ.</p>.<p>ಅದರಂತೆ ಕೋವಿಡ್–19ನ ರೋಗ ಲಕ್ಷಣ ಇಲ್ಲದವರಿಗೆ ಅವರ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೇ ರೋಗಿಯ ಚಿಕಿತ್ಸೆಗೆ ನೆರವಾಗಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಗರಿಷ್ಠ 147 ಮಂದಿಗೆ ಕೋವಿಡ್–19 ದೃಢವಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,242ಕ್ಕೆ ಏರಿದೆ.</p>.<p>ಭಾನುವಾರ ಸೋಂಕು ದೃಢಪಟ್ಟಿರುವ 147 ಮಂದಿಯ ಪೈಕಿ, 35 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. ಇನ್ನು ಐಎಲ್ಐನ 40 ಹಾಗೂ ಎಸ್ಎಆರ್ಐನ 2 ಪ್ರಕರಣಗಳು ವರದಿಯಾಗಿವೆ. ರ್ಯಾಂಡಮ್ ತಪಾಸಣೆಯಲ್ಲಿ 48 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಶಸ್ತ್ರಚಿಕಿತ್ಸೆಗೆ ಬಂದಿದ್ದ ಐವರಲ್ಲಿ ಹಾಗೂ ಹಡಗಿನ ಮೂಲಕ ಮಲೇಷ್ಯಾ ಪ್ರವಾಸ ಮಾಡಿದ್ದ ಇಬ್ಬರಿಗೆ ಕೋವಿಡ್–19 ತಗಲಿದೆ.</p>.<p><strong>ಐಸಿಯು ಚಿಕಿತ್ಸೆ ಹೆಚ್ಚಳ: </strong>ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 10ಕ್ಕೆ ಏರಿದೆ. 57 ಹಾಗೂ 50 ವರ್ಷದ ಮಹಿಳೆಯರಿಗೆ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಇವರಿಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.</p>.<p>86, 84, 64 ವರ್ಷದ ವೃದ್ಧೆಯರು, 72, 65 ವರ್ಷದ ವೃದ್ಧರು, 52 ವರ್ಷದ ಇಬ್ಬರು ಪುರುಷರು, 31 ವರ್ಷದ ವ್ಯಕ್ತಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.</p>.<p>38 ಮಂದಿ ಗುಣಮುಖ: ಜಿಲ್ಲೆಯಲ್ಲಿ ಒಟ್ಟು 38 ಮಂದಿ ಗುಣಮುಖರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.</p>.<p>2 ವರ್ಷದ ಗಂಡು ಮಗು, 6 ವರ್ಷದ ಇಬ್ಬರು ಬಾಲಕರು, 15 ಮತ್ತು 17 ವರ್ಷದ ಬಾಲಕಿಯರು, 80, 65, 62, 60 ವರ್ಷದ ವೃದ್ಧರು ಗುಣಮುಖರಾದವರಲ್ಲಿ ಸೇರಿದ್ದಾರೆ.</p>.<p class="Briefhead"><strong>ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ</strong></p>.<p>ರಾಜ್ಯ ಸರ್ಕಾರದ ಸುತ್ತೋಲೆಯಂತೆ ರೋಗ ಲಕ್ಷಣ ಇಲ್ಲದ ಕೋವಿಡ್–19 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ಮಾರ್ಗಸೂಚಿ ಹೊರಡಿಸಲಾಗಿದೆ.</p>.<p>ಅದರಂತೆ ಕೋವಿಡ್–19ನ ರೋಗ ಲಕ್ಷಣ ಇಲ್ಲದವರಿಗೆ ಅವರ ಮನೆಯಲ್ಲೇ ಪ್ರತ್ಯೇಕವಾಗಿ ಆರೈಕೆಗೆ ವ್ಯವಸ್ಥೆ ಮಾಡಲಾಗುತ್ತಿದೆ. ಸಾರ್ವಜನಿಕರು ಯಾವುದೇ ಆತಂಕಕ್ಕೆ ಒಳಗಾಗದೇ ರೋಗಿಯ ಚಿಕಿತ್ಸೆಗೆ ನೆರವಾಗಲು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>