ನ್ಯಾಯಾಧೀಶರು, ಪೊಲೀಸ್ ಕಮಿಷನರ್, ಎಸ್ಪಿ, ಜೈಲು ಅಧೀಕ್ಷಕರು, ಸರ್ಕಾರಿ ಅಭಿಯೋಜಕರನ್ನು ಒಳಗೊಂಡ ಸಮಿತಿಯು ಪರಿಶೀಲನೆ ನಡೆಸಿ, ಅರ್ಹ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವ ಅಧಿಕಾರ ಹೊಂದಿದೆ. ಅದರಂತೆ ಕಳೆದ ವರ್ಷ 14, ಈ ವರ್ಷ 15 ಸೇರಿದಂತೆ 29 ವಿಚಾರಣಾಧೀನ ಕೈದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಜೈಲು ಅಧೀಕ್ಷಕ ಚಂದನ್ ಪಟೇಲ್ ತಿಳಿಸಿದ್ದಾರೆ.