ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಕೋವಿಡ್ 19 ಪ್ರಕರಣಗಳು ದೃಢಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು 12 ಮಂದಿಗೆ ಕೋವಿಡ್–19 ಸೋಂಕು ತಗುಲಿದೆ. ಮೂರು ಹೊಸ ಪ್ರಕರಣಗಳಲ್ಲಿ ಒಬ್ಬರು ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಮಹಿಳೆಯಾಗಿದ್ದು, ಇನ್ನಿಬ್ಬರು ದೆಹಲಿಯಲ್ಲಿ ತಬ್ಲೀಘಿ ಜಮಾತ್ ಸಮಾವೇಶದಲ್ಲಿ ಭಾಗವಹಿಸಿದವರಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.