ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ.ಕ: ಕೋವಿಡ್ ಸೋಂಕಿನ ಸಾವಿನ ಸಂಖ್ಯೆ 600ಕ್ಕೆ ಏರಿಕೆ

607 ಜನರು ಗುಣಮುಖ: 316 ಜನರಿಗೆ ಸೋಂಕು
Last Updated 10 ಅಕ್ಟೋಬರ್ 2020, 16:46 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯಲ್ಲಿ ಮೃತಪಟ್ಟಿರುವ ನಾಲ್ವರಿಗೆ ಕೋವಿಡ್–19 ಇರುವುದು ಶನಿವಾರ ದೃಢವಾಗಿದ್ದು, ಸಾವಿನ ಸಂಖ್ಯೆ 600ಕ್ಕೆ ಏರಿಕೆಯಾಗಿದೆ. ಶನಿವಾರ ಜಿಲ್ಲೆಯ 316 ಮಂದಿಗೆ ಕೋವಿಡ್‌ ಸೋಂಕು ಪತ್ತೆಯಾಗಿದ್ದು, 607 ಮಂದಿ ಗುಣಮುಖರಾಗಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1,93,669 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಬಂದಿದೆ. 26,264 ಜನರಿಗೆ ಕೋವಿಡ್–19 ದೃಢವಾಗಿದೆ. 21,461 ಮಂದಿ ಗುಣಮುಖರಾಗಿದ್ದು, ಸದ್ಯ 4,203 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

6,221 ಪ್ರಕರಣ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, ₹ 7,70,835 ದಂಡ ವಸೂಲಿ ಮಾಡಲಾಗಿದೆ.

500 ಗಡಿ ದಾಟಿದ ಸೋಂಕು: ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಕೋವಿಡ್–19 ಪ್ರಮಾಣ ಹೆಚ್ಚಳವಾಗಿದ್ದು, ಮೊದಲ ಬಾರಿಗೆ 500 ರ ಗಡಿ ದಾಟಿದೆ. ಒಟ್ಟು 539 ಮಂದಿಗೆ ಕೋವಿಡ್–19 ದೃಢವಾಗಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT