<p><strong>ಮಂಗಳೂರು: </strong>ಜಿಲ್ಲೆಯಲ್ಲಿ ಮೃತಪಟ್ಟಿರುವ ನಾಲ್ವರಿಗೆ ಕೋವಿಡ್–19 ಇರುವುದು ಶನಿವಾರ ದೃಢವಾಗಿದ್ದು, ಸಾವಿನ ಸಂಖ್ಯೆ 600ಕ್ಕೆ ಏರಿಕೆಯಾಗಿದೆ. ಶನಿವಾರ ಜಿಲ್ಲೆಯ 316 ಮಂದಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, 607 ಮಂದಿ ಗುಣಮುಖರಾಗಿದ್ದಾರೆ.</p>.<p>ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1,93,669 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಬಂದಿದೆ. 26,264 ಜನರಿಗೆ ಕೋವಿಡ್–19 ದೃಢವಾಗಿದೆ. 21,461 ಮಂದಿ ಗುಣಮುಖರಾಗಿದ್ದು, ಸದ್ಯ 4,203 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>6,221 ಪ್ರಕರಣ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, ₹ 7,70,835 ದಂಡ ವಸೂಲಿ ಮಾಡಲಾಗಿದೆ.</p>.<p><strong>500 ಗಡಿ ದಾಟಿದ ಸೋಂಕು: </strong>ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಕೋವಿಡ್–19 ಪ್ರಮಾಣ ಹೆಚ್ಚಳವಾಗಿದ್ದು, ಮೊದಲ ಬಾರಿಗೆ 500 ರ ಗಡಿ ದಾಟಿದೆ. ಒಟ್ಟು 539 ಮಂದಿಗೆ ಕೋವಿಡ್–19 ದೃಢವಾಗಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಜಿಲ್ಲೆಯಲ್ಲಿ ಮೃತಪಟ್ಟಿರುವ ನಾಲ್ವರಿಗೆ ಕೋವಿಡ್–19 ಇರುವುದು ಶನಿವಾರ ದೃಢವಾಗಿದ್ದು, ಸಾವಿನ ಸಂಖ್ಯೆ 600ಕ್ಕೆ ಏರಿಕೆಯಾಗಿದೆ. ಶನಿವಾರ ಜಿಲ್ಲೆಯ 316 ಮಂದಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, 607 ಮಂದಿ ಗುಣಮುಖರಾಗಿದ್ದಾರೆ.</p>.<p>ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1,93,669 ಮಂದಿಯ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಆ ಪೈಕಿ 1,67,405 ಮಂದಿಯ ವರದಿ ನೆಗೆಟಿವ್ ಬಂದಿದೆ. 26,264 ಜನರಿಗೆ ಕೋವಿಡ್–19 ದೃಢವಾಗಿದೆ. 21,461 ಮಂದಿ ಗುಣಮುಖರಾಗಿದ್ದು, ಸದ್ಯ 4,203 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>6,221 ಪ್ರಕರಣ: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಕೋವಿಡ್ ಮಾರ್ಗಸೂಚಿಯ ಹೊರತಾಗಿಯೂ ಮಾಸ್ಕ್ ಧರಿಸದೇ ಸಾರ್ವಜನಿಕ ಸ್ಥಳದಲ್ಲಿ ಸಂಚರಿಸಿದ ವ್ಯಕ್ತಿಗಳ ವಿರುದ್ಧ ಈವರೆಗೆ 6,221 ಪ್ರಕರಣ ದಾಖಲಿಸಲಾಗಿದ್ದು, ₹ 7,70,835 ದಂಡ ವಸೂಲಿ ಮಾಡಲಾಗಿದೆ.</p>.<p><strong>500 ಗಡಿ ದಾಟಿದ ಸೋಂಕು: </strong>ಕಾಸರಗೋಡು ಜಿಲ್ಲೆಯಲ್ಲಿ ಶನಿವಾರ ಕೋವಿಡ್–19 ಪ್ರಮಾಣ ಹೆಚ್ಚಳವಾಗಿದ್ದು, ಮೊದಲ ಬಾರಿಗೆ 500 ರ ಗಡಿ ದಾಟಿದೆ. ಒಟ್ಟು 539 ಮಂದಿಗೆ ಕೋವಿಡ್–19 ದೃಢವಾಗಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>