<p><strong>ಮಂಗಳೂರು</strong>: ಕರಾವಳಿಯ ಕ್ರೀಡೆಯಾದ ಕಂಬಳ ಈ ಬಾರಿ ನಡೆಯುತ್ತದೆಯೋ ಇಲ್ಲವೋ ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ನವೆಂಬರ್ನಿಂದ ಮಾರ್ಚ್ವರೆಗೆ ಕಂಬಳ ನಡೆಯುತ್ತಿದ್ದು, ಈ ಬಾರಿ ಇನ್ನೂ ಸಿದ್ಧತೆಗಳೂ ಆರಂಭವಾಗದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.</p>.<p>ನಾಲ್ಕನೇ ಹಂತದ ಅನ್ಲಾಕ್ನಲ್ಲಿ 100ಕ್ಕಿಂತ ಕಡಿಮೆ ಜನರೊಂದಿಗೆ ಕಾರ್ಯಕ್ರಮ ಮಾಡಲು ಅನುಮತಿ ನೀಡಿದೆ. ಆದರೆ, ಕಂಬಳದಲ್ಲಿ ಜನರ ಪಾಲ್ಗೊಳ್ಳುವಿಕೆ, ಸುರಕ್ಷಿತ ಅಂತರ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿ ಪರಿಣಮಿಸಿದೆ.</p>.<p>‘ಕಂಬಳದಲ್ಲಿ ಸರ್ಕಾರ ಮಾರ್ಗಸೂಚಿ ಪಾಲನೆ ಕಷ್ಟವಾಗಿದ್ದು, ಈ ಋತುವಿನ ಕಂಬಳದ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಬರುವ ದಿನಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕೈಗೊಳ್ಳುವ ನಿರ್ಧಾರ ನೋಡಿಕೊಂಡು ಮುಂದಿನತೀರ್ಮಾನ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ಹೇಳಿದ್ದಾರೆ.</p>.<p>ಕಳೆದ ವರ್ಷ ನವೆಂಬರ್ 30 ರಂದು ಬಂಟ್ವಾಳ ತಾಲ್ಲೂಕಿನ ಹೊಕ್ಕಾಡಿಗೋಳಿಯ ಕಂಬಳದೊಂದಿಗೆ ಆರಂಭವಾಗಿದ್ದ ಋತು, ಮಾರ್ಚ್ 15ರಂದು ನಡೆದ ಬಂಗಾಡಿ ಕಂಬಳದೊಂದಿಗೆ ಮುಕ್ತಾಯವಾಗಿತ್ತು. ಕಟಪಾಡಿ, ತಲಪಾಡಿ, ತಿರುವೈಲು ಕಂಬಳಗಳು ನಡೆದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಕರಾವಳಿಯ ಕ್ರೀಡೆಯಾದ ಕಂಬಳ ಈ ಬಾರಿ ನಡೆಯುತ್ತದೆಯೋ ಇಲ್ಲವೋ ಎನ್ನುವ ಗೊಂದಲ ಇನ್ನೂ ಮುಂದುವರಿದಿದೆ. ನವೆಂಬರ್ನಿಂದ ಮಾರ್ಚ್ವರೆಗೆ ಕಂಬಳ ನಡೆಯುತ್ತಿದ್ದು, ಈ ಬಾರಿ ಇನ್ನೂ ಸಿದ್ಧತೆಗಳೂ ಆರಂಭವಾಗದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ.</p>.<p>ನಾಲ್ಕನೇ ಹಂತದ ಅನ್ಲಾಕ್ನಲ್ಲಿ 100ಕ್ಕಿಂತ ಕಡಿಮೆ ಜನರೊಂದಿಗೆ ಕಾರ್ಯಕ್ರಮ ಮಾಡಲು ಅನುಮತಿ ನೀಡಿದೆ. ಆದರೆ, ಕಂಬಳದಲ್ಲಿ ಜನರ ಪಾಲ್ಗೊಳ್ಳುವಿಕೆ, ಸುರಕ್ಷಿತ ಅಂತರ ಸೇರಿದಂತೆ ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿ ಪರಿಣಮಿಸಿದೆ.</p>.<p>‘ಕಂಬಳದಲ್ಲಿ ಸರ್ಕಾರ ಮಾರ್ಗಸೂಚಿ ಪಾಲನೆ ಕಷ್ಟವಾಗಿದ್ದು, ಈ ಋತುವಿನ ಕಂಬಳದ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ. ಬರುವ ದಿನಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಕೈಗೊಳ್ಳುವ ನಿರ್ಧಾರ ನೋಡಿಕೊಂಡು ಮುಂದಿನತೀರ್ಮಾನ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್. ಶೆಟ್ಟಿ ಹೇಳಿದ್ದಾರೆ.</p>.<p>ಕಳೆದ ವರ್ಷ ನವೆಂಬರ್ 30 ರಂದು ಬಂಟ್ವಾಳ ತಾಲ್ಲೂಕಿನ ಹೊಕ್ಕಾಡಿಗೋಳಿಯ ಕಂಬಳದೊಂದಿಗೆ ಆರಂಭವಾಗಿದ್ದ ಋತು, ಮಾರ್ಚ್ 15ರಂದು ನಡೆದ ಬಂಗಾಡಿ ಕಂಬಳದೊಂದಿಗೆ ಮುಕ್ತಾಯವಾಗಿತ್ತು. ಕಟಪಾಡಿ, ತಲಪಾಡಿ, ತಿರುವೈಲು ಕಂಬಳಗಳು ನಡೆದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>