ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಹಾರ ಹಾಗೂ ಪೊಲೀಸ್ ಇಲಾಖೆ ಜೊತೆ ಸಭೆ ನಡೆಸಲಾಗಿದೆ. ದಿನಕ್ಕೆ 150-200 ಜನರಿಗೆ ಪಡಿತರ ವಿತರಿಸಲು ಸೂಚಿಸಲಾಗಿದೆ. ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ಪಡಿತರ ತೆಗೆದುಕೊಂಡು ಹೋಗಬಹುದು. 10 ಗಂಟೆಯ ನಂತರ ಪಡಿತರ ತೆಗೆದುಕೊಂಡು ಹೋಗುವವರಿಗೆ ಯಾವುದೇ ತೊಂದರೆ ಮಾಡದಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ತೊಂದರೆ ಆದಲ್ಲಿ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದರು.