<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಕೇರಳದ ಗಡಿಭಾಗ ತಲಪಾಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವವರ ಕೋವಿಡ್ ನೆಗೆಟಿವ್ ವರದಿ ತಪಾಸಣೆ ಮಂಗಳವಾರ ಆರಂಭಗೊಂಡಿದೆ. ನೆಗೆಟಿವ್ ವರದಿ ಇಲ್ಲದವರಿಂದ ಸ್ಥಳದಲ್ಲಿಯೇ ಗಂಟಲು ದ್ರವ ಸಂಗ್ರಹಿಸಲಾಗುತ್ತಿದೆ.</p>.<p>ಪೊಲೀಸ್, ಆರೋಗ್ಯ, ಶಿಕ್ಷಣ, ಕಂದಾಯ ಹಾಗೂ ಗೃಹರಕ್ಷಕ ದಳದ ಸುಮಾರು 50 ಮಂದಿ ಸಿಬ್ಬಂದಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಂಜೆ 6 ಗಂಟೆಯವರೆಗೆ ಆರ್ಟಿಪಿಸಿಆರ್ ಪರೀಕ್ಷೆಗೆ 140 ಮಂದಿಯ ಮತ್ತು ಆಂಟಿಜನ್ ಪರೀಕ್ಷೆಗೆ 30 ಜನರ ಗಂಟಲು ದ್ರವ ಸಂಗ್ರಹಿಸಲಾಗಿದೆ.</p>.<p>ಡೆಲ್ಟಾ ಪ್ಲಸ್ ವೇರಿಯಂಟ್ ಸೋಂಕಿತರ ಸಂಖ್ಯೆ ಕೇರಳ ಭಾಗದಲ್ಲಿ ಹೆಚ್ಚಿರುವ ಕಾರಣ ಸೋಮವಾರದಿಂದ ಜಿಲ್ಲಾಡಳಿತ ಗಡಿಭಾಗದಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ. ಮಂಗಳವಾರದಿಂದ ತಪಾಸಣೆ ಆರಂಭಗೊಂಡರೂ, ಮೂರು ದಿನ ವಿನಾಯಿತಿ ನೀಡಲಾಗಿದೆ.</p>.<p>‘ಕೇರಳ ಹಾಗೂ ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಬರುವ ಪ್ರಯಾಣಿಕರಿಂದ ಕೋವಿಡ್ ನೆಗೆಟಿವ್ ವರದಿಯನ್ನು ನಿರ್ವಾಹಕರು ಪಡೆಯುವಂತೆ ಜಿಲ್ಲಾಡಳಿತ ಸೂಚಿಸಿದ್ದು, ಬಸ್ಗಳನ್ನು ತಪಾಸಣೆ ಮಾಡುತ್ತಿಲ್ಲ. ಉಳಿದ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ’ ಎಂದು ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಳ್ಳಾಲ (ದಕ್ಷಿಣ ಕನ್ನಡ):</strong> ಕೇರಳದ ಗಡಿಭಾಗ ತಲಪಾಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವವರ ಕೋವಿಡ್ ನೆಗೆಟಿವ್ ವರದಿ ತಪಾಸಣೆ ಮಂಗಳವಾರ ಆರಂಭಗೊಂಡಿದೆ. ನೆಗೆಟಿವ್ ವರದಿ ಇಲ್ಲದವರಿಂದ ಸ್ಥಳದಲ್ಲಿಯೇ ಗಂಟಲು ದ್ರವ ಸಂಗ್ರಹಿಸಲಾಗುತ್ತಿದೆ.</p>.<p>ಪೊಲೀಸ್, ಆರೋಗ್ಯ, ಶಿಕ್ಷಣ, ಕಂದಾಯ ಹಾಗೂ ಗೃಹರಕ್ಷಕ ದಳದ ಸುಮಾರು 50 ಮಂದಿ ಸಿಬ್ಬಂದಿ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಾಚರಣೆಗೆ ಇಳಿದಿದ್ದಾರೆ. ಸಂಜೆ 6 ಗಂಟೆಯವರೆಗೆ ಆರ್ಟಿಪಿಸಿಆರ್ ಪರೀಕ್ಷೆಗೆ 140 ಮಂದಿಯ ಮತ್ತು ಆಂಟಿಜನ್ ಪರೀಕ್ಷೆಗೆ 30 ಜನರ ಗಂಟಲು ದ್ರವ ಸಂಗ್ರಹಿಸಲಾಗಿದೆ.</p>.<p>ಡೆಲ್ಟಾ ಪ್ಲಸ್ ವೇರಿಯಂಟ್ ಸೋಂಕಿತರ ಸಂಖ್ಯೆ ಕೇರಳ ಭಾಗದಲ್ಲಿ ಹೆಚ್ಚಿರುವ ಕಾರಣ ಸೋಮವಾರದಿಂದ ಜಿಲ್ಲಾಡಳಿತ ಗಡಿಭಾಗದಲ್ಲಿ ಆರ್ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯಗೊಳಿಸಿದೆ. ಮಂಗಳವಾರದಿಂದ ತಪಾಸಣೆ ಆರಂಭಗೊಂಡರೂ, ಮೂರು ದಿನ ವಿನಾಯಿತಿ ನೀಡಲಾಗಿದೆ.</p>.<p>‘ಕೇರಳ ಹಾಗೂ ಕರ್ನಾಟಕ ಸಾರಿಗೆ ಬಸ್ಗಳಲ್ಲಿ ಬರುವ ಪ್ರಯಾಣಿಕರಿಂದ ಕೋವಿಡ್ ನೆಗೆಟಿವ್ ವರದಿಯನ್ನು ನಿರ್ವಾಹಕರು ಪಡೆಯುವಂತೆ ಜಿಲ್ಲಾಡಳಿತ ಸೂಚಿಸಿದ್ದು, ಬಸ್ಗಳನ್ನು ತಪಾಸಣೆ ಮಾಡುತ್ತಿಲ್ಲ. ಉಳಿದ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ’ ಎಂದು ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರದೀಪ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>