<p><strong>ಮಂಗಳೂರು:</strong> ಮಂಗಳೂರಿನ ಟೀಂ- ಬಿ ಹ್ಯೂಮನ್ ಹಾಗೂ ಟೀಂ ಐವೈಸಿ ಯೂತ್ ತಂಡಗಳು ಒಂದೇ ದಿನ ಮೃತರಾದ ನಾಲ್ವರ ಅಂತ್ಯಕ್ರಿಯೆಯನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸಿ, ಮಾನವೀಯತೆ ಮೆರೆದಿವೆ.</p>.<p>ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ನಿಂದ ಮೃತಪಟ್ಟವರ ದೇಹವನ್ನು ಸಂಬಂಧಿಕರೇ ಮುಟ್ಟಲು ಭಯಪಟ್ಟಾಗ, ಅಲ್ಲಿಗೆ ಬಂದ, ಟೀಂ - ಬಿ ಹ್ಯೂಮನ್ ನ ಆಸಿಫ್ ಡೀಲ್ಸ್ ಮತ್ತು ಅವರ ಸಹೋದರ ಐವೈಸಿ ಯೂತ್ ತಂಡದ ಸುಹೈಲ್ ಕಂದಕ್, ನಾಲ್ಕು ಮೃತದೇಹದ ಅಂತ್ಯಕ್ರಿಯೆಯನ್ನು ಬೊಲೂರು, ಕದ್ರಿ, ನಂದಿಗುಡ್ಡೆಯ ಸ್ಮಶಾನದಲ್ಲಿ ನೆರವೇರಿಸಿದರು.</p>.<p>ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಟೀಂ ಬಿ ಹ್ಯೂಮನ್ ತಂಡವು ರೋಗಿಗಳೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು, ಅವರಿಗೆ ಅಗತ್ಯ ನೆರವು ನೀಡುತ್ತಿದೆ.</p>.<p>‘ಮೃತಪಟ್ಟ ವ್ಯಕ್ತಿಗಳ ಶವವನ್ನು ಅವರ ಸಂಬಂಧಿಕರು ಮುಟ್ಟಲು ಭಯಪಡುವಂತಹ ಕರುಣಾಜನಕ ಸ್ಥಿತಿ ನಿರ್ಮಾಣವಾ ಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕನ್ನು ಸುರಕ್ಷಿತಗೊ ಳಿಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಆಸಿಫ್ ಡೀಲ್ಸ್ ತಿಳಿಸಿದ್ದಾರೆ</p>.<p>ಬೆಂಗಳೂರು, ಬೆಳ್ತಂಗಡಿ, ಮಂಗಳಾದೇವಿ, ಕಂದಾವರ ಗುರುಪುರದ ನಾಲ್ಕು ವ್ಯಕ್ತಿಗಳ ಅಂತಿಮ ಸಂಸ್ಕಾರ ಮಾಡಿರುವ ಟೀಂ - ಹ್ಯೂಮನ್ ತಂಡದಲ್ಲಿ ಆಸಿಫ್ ಡೀಲ್ಸ್, ಅಶ್ರಫ್ ಕಂದಕ್, ಇಮ್ರಾನ್, ಅಹ್ನಾಫ್ ಡೀಲ್ಸ್, ವಾಹಿದ್ ಹಾಗೂ ಐವೈಸಿ ಯೂತ್ ತಂಡದಲ್ಲಿ ಸುಹೈಲ್ ಕಂದಕ್, ಲುಕ್ಮಾನ್, ಹಸನ್ ಡೀಲ್ಸ್, ದೀಕ್ಷಿತ್, ಅಪ್ಪಿ, ಬಾಚಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಮಂಗಳೂರಿನ ಟೀಂ- ಬಿ ಹ್ಯೂಮನ್ ಹಾಗೂ ಟೀಂ ಐವೈಸಿ ಯೂತ್ ತಂಡಗಳು ಒಂದೇ ದಿನ ಮೃತರಾದ ನಾಲ್ವರ ಅಂತ್ಯಕ್ರಿಯೆಯನ್ನು ಹಿಂದೂ ಸಂಪ್ರದಾಯದಂತೆ ನೆರವೇರಿಸಿ, ಮಾನವೀಯತೆ ಮೆರೆದಿವೆ.</p>.<p>ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್ನಿಂದ ಮೃತಪಟ್ಟವರ ದೇಹವನ್ನು ಸಂಬಂಧಿಕರೇ ಮುಟ್ಟಲು ಭಯಪಟ್ಟಾಗ, ಅಲ್ಲಿಗೆ ಬಂದ, ಟೀಂ - ಬಿ ಹ್ಯೂಮನ್ ನ ಆಸಿಫ್ ಡೀಲ್ಸ್ ಮತ್ತು ಅವರ ಸಹೋದರ ಐವೈಸಿ ಯೂತ್ ತಂಡದ ಸುಹೈಲ್ ಕಂದಕ್, ನಾಲ್ಕು ಮೃತದೇಹದ ಅಂತ್ಯಕ್ರಿಯೆಯನ್ನು ಬೊಲೂರು, ಕದ್ರಿ, ನಂದಿಗುಡ್ಡೆಯ ಸ್ಮಶಾನದಲ್ಲಿ ನೆರವೇರಿಸಿದರು.</p>.<p>ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಟೀಂ ಬಿ ಹ್ಯೂಮನ್ ತಂಡವು ರೋಗಿಗಳೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು, ಅವರಿಗೆ ಅಗತ್ಯ ನೆರವು ನೀಡುತ್ತಿದೆ.</p>.<p>‘ಮೃತಪಟ್ಟ ವ್ಯಕ್ತಿಗಳ ಶವವನ್ನು ಅವರ ಸಂಬಂಧಿಕರು ಮುಟ್ಟಲು ಭಯಪಡುವಂತಹ ಕರುಣಾಜನಕ ಸ್ಥಿತಿ ನಿರ್ಮಾಣವಾ ಗಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕನ್ನು ಸುರಕ್ಷಿತಗೊ ಳಿಸಿಕೊಳ್ಳಬೇಕಾದ ಅಗತ್ಯವಿದೆ’ ಎಂದು ಆಸಿಫ್ ಡೀಲ್ಸ್ ತಿಳಿಸಿದ್ದಾರೆ</p>.<p>ಬೆಂಗಳೂರು, ಬೆಳ್ತಂಗಡಿ, ಮಂಗಳಾದೇವಿ, ಕಂದಾವರ ಗುರುಪುರದ ನಾಲ್ಕು ವ್ಯಕ್ತಿಗಳ ಅಂತಿಮ ಸಂಸ್ಕಾರ ಮಾಡಿರುವ ಟೀಂ - ಹ್ಯೂಮನ್ ತಂಡದಲ್ಲಿ ಆಸಿಫ್ ಡೀಲ್ಸ್, ಅಶ್ರಫ್ ಕಂದಕ್, ಇಮ್ರಾನ್, ಅಹ್ನಾಫ್ ಡೀಲ್ಸ್, ವಾಹಿದ್ ಹಾಗೂ ಐವೈಸಿ ಯೂತ್ ತಂಡದಲ್ಲಿ ಸುಹೈಲ್ ಕಂದಕ್, ಲುಕ್ಮಾನ್, ಹಸನ್ ಡೀಲ್ಸ್, ದೀಕ್ಷಿತ್, ಅಪ್ಪಿ, ಬಾಚಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>