31 ವರ್ಷ ವಯಸ್ಸಿನ ಭಟ್ಕಳದ ಯುವಕನನ್ನು ಮಂಗಳವಾರ ನಗರದ ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆ ಸಮೀಪಿಸುವಷ್ಟರಲ್ಲಿ ಯುವಕ ಕೊನೆಯುಸಿರೆಳೆದಿದ್ದ. ಬಳಿಕ ಮೃತದೇಹದ ಗಂಟಲಿನ ದ್ರವದ ಪರೀಕ್ಷೆ ನಡೆಸಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೃತ ಯುವಕ ಅನಿಯಂತ್ರಿತ ಮಧುಮೇಹದ ಸಮಸ್ಯೆಯಿಂದ ಬಳಲುತ್ತಿದ್ದ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.