<p>ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 322 ಮಂದಿಗೆ ಕೋವಿಡ್–19 ದೃಢವಾಗಿದ್ದು, 277 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ 12 ಮಂದಿಗೆ ಕೋವಿಡ್–19 ಇರುವುದು ಶುಕ್ರವಾರ ಖಚಿತವಾಗಿದೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 23,761 ಜನರಿಗೆ ಸೋಂಕು ದೃಢವಾಗಿದ್ದು, ಈ ಪೈಕಿ 17,365 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 5,839 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 557 ಕ್ಕೆ ತಲುಪಿದೆ.</p>.<p>ಇದುವರೆಗೆ 1,66,456 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,42,695 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>ಕಾಸರಗೋಡಿನಲ್ಲಿ 476 ಮಂದಿಗೆ ಸೋಂಕು:</p>.<p>ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 476 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11,734ಕ್ಕೆ ಏರಿಕೆಯಾಗಿದೆ. 476 ಮಂದಿಯ ಪೈಕಿ 457 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. 13 ಮಂದಿ ಹೊರರಾಜ್ಯ, 6 ಮಂದಿ ವಿದೇಶಗಳಿಂದ ಬಂದವರಾಗಿದ್ದು, ಆರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ತಗಲಿದೆ.</p>.<p>ಶುಕ್ರವಾರ 165 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,225 ಸಕ್ರಿಯ ಪ್ರಕರಣಗಳಿದ್ದು, 1,751 ಮಂದಿ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Briefhead">ಶಾಸಕ ಕಾಮತ್ ಕ್ವಾರಂಟೈನ್</p>.<p>ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಆಪ್ತ ಕಾರ್ಯದರ್ಶಿಗೆ ಕೋವಿಡ್–19 ದೃಢವಾಗಿದ್ದು, ಶಾಸಕರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.</p>.<p>‘ಗುರುವಾರ ನನ್ನ ಆಪ್ತ ಕಾರ್ಯದರ್ಶಿಗೆ ಕೋವಿಡ್ ಧೃಡಪಟ್ಟಿದೆ. ಕೆಲಸದ ವಿಚಾರವಾಗಿ ಅವರನ್ನು ಹಲವಾರು ಬಾರಿ ಭೇಟಿಯಾಗಿದ್ದರಿಂದ ಸರ್ಕಾರದ ನಿಯಮಾವಳಿ ಪ್ರಕಾರ ಗುರುವಾರ ಸಂಜೆಯಿಂದ ಸ್ವಯಂ ಕ್ವಾರೆಂಟೈನ್ನ್ ಆಗಿದ್ದೇನೆ. ಸಾರ್ವಜನಿಕರು ಸಹಕರಿಸಬೇಕು. ಜಾಗೃತರಾಗಿರಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಗಳೂರು: ಜಿಲ್ಲೆಯಲ್ಲಿ ಶುಕ್ರವಾರ 322 ಮಂದಿಗೆ ಕೋವಿಡ್–19 ದೃಢವಾಗಿದ್ದು, 277 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ 12 ಮಂದಿಗೆ ಕೋವಿಡ್–19 ಇರುವುದು ಶುಕ್ರವಾರ ಖಚಿತವಾಗಿದೆ.</p>.<p>ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 23,761 ಜನರಿಗೆ ಸೋಂಕು ದೃಢವಾಗಿದ್ದು, ಈ ಪೈಕಿ 17,365 ಮಂದಿ ಗುಣಮುಖರಾಗಿದ್ದಾರೆ. ಸದ್ಯಕ್ಕೆ 5,839 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಸಂಖ್ಯೆ 557 ಕ್ಕೆ ತಲುಪಿದೆ.</p>.<p>ಇದುವರೆಗೆ 1,66,456 ಮಂದಿಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಈ ಪೈಕಿ 1,42,695 ಜನರ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>ಕಾಸರಗೋಡಿನಲ್ಲಿ 476 ಮಂದಿಗೆ ಸೋಂಕು:</p>.<p>ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 476 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 11,734ಕ್ಕೆ ಏರಿಕೆಯಾಗಿದೆ. 476 ಮಂದಿಯ ಪೈಕಿ 457 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ. 13 ಮಂದಿ ಹೊರರಾಜ್ಯ, 6 ಮಂದಿ ವಿದೇಶಗಳಿಂದ ಬಂದವರಾಗಿದ್ದು, ಆರು ಆರೋಗ್ಯ ಸಿಬ್ಬಂದಿಗಳಿಗೆ ಸೋಂಕು ತಗಲಿದೆ.</p>.<p>ಶುಕ್ರವಾರ 165 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3,225 ಸಕ್ರಿಯ ಪ್ರಕರಣಗಳಿದ್ದು, 1,751 ಮಂದಿ ಹೋಂ ಐಸೋಲೇಷನ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Briefhead">ಶಾಸಕ ಕಾಮತ್ ಕ್ವಾರಂಟೈನ್</p>.<p>ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಆಪ್ತ ಕಾರ್ಯದರ್ಶಿಗೆ ಕೋವಿಡ್–19 ದೃಢವಾಗಿದ್ದು, ಶಾಸಕರು ಕ್ವಾರಂಟೈನ್ಗೆ ಒಳಗಾಗಿದ್ದಾರೆ.</p>.<p>‘ಗುರುವಾರ ನನ್ನ ಆಪ್ತ ಕಾರ್ಯದರ್ಶಿಗೆ ಕೋವಿಡ್ ಧೃಡಪಟ್ಟಿದೆ. ಕೆಲಸದ ವಿಚಾರವಾಗಿ ಅವರನ್ನು ಹಲವಾರು ಬಾರಿ ಭೇಟಿಯಾಗಿದ್ದರಿಂದ ಸರ್ಕಾರದ ನಿಯಮಾವಳಿ ಪ್ರಕಾರ ಗುರುವಾರ ಸಂಜೆಯಿಂದ ಸ್ವಯಂ ಕ್ವಾರೆಂಟೈನ್ನ್ ಆಗಿದ್ದೇನೆ. ಸಾರ್ವಜನಿಕರು ಸಹಕರಿಸಬೇಕು. ಜಾಗೃತರಾಗಿರಬೇಕು ಎಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>