<p><strong>ಮಂಗಳೂರು</strong>: ಜಿಲ್ಲೆಯಲ್ಲಿ ಮಂಗಳವಾರ 272 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 382 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಏಳು ಮಂದಿಗೆ ಮಂಗಳವಾರ ಕೋವಿಡ್–19 ಇರುವುದು ಖಚಿತವಾಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 1,76,185 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 1,51,356 ಮಂದಿಯ ವರದಿ ನೆಗೆಟಿವ್ ಬಂದಿದೆ. 18,786 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,462 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 581ಕ್ಕೆ ಏರಿದೆ.</p>.<p>6.58 ಲಕ್ಷ ದಂಡ: ಜಿಲ್ಲೆಯಲ್ಲಿ ಈವರೆಗೆ ಕೋವಿಡ್–19 ನಿಯಮ ಉಲ್ಲಂಘನೆಯ 5,345 ಪ್ರಕರಣ ಪತ್ತೆಯಾಗಿದ್ದು,₹6,58,385 ದಂಡ ವಸೂಲಿ ಮಾಡಲಾಗಿದೆ.</p>.<p>ಸರ್ಕಾರದ ಆದೇಶದಂತೆ ನಿಯಮ ಉಲ್ಲಂಘಿಸಿದಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p><strong>ಕಾಸರಗೋಡು– 416 ಮಂದಿಗೆ ಸೋಂಕು:</strong></p>.<p>ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 416 ಮಂದಿಗೆ ಕೋವಿಡ್ ದೃಢಪಟ್ಟಿದೆ. 398 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. 202 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 12,476 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 11,108 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. ಒಟ್ಟು 8,904 ಮಂದಿ ಗುಣಮುಖರಾಗಿದ್ದಾರೆ. 3678 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು</strong>: ಜಿಲ್ಲೆಯಲ್ಲಿ ಮಂಗಳವಾರ 272 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 382 ಮಂದಿ ಗುಣಮುಖರಾಗಿದ್ದಾರೆ. ಮೃತಪಟ್ಟಿರುವ ಏಳು ಮಂದಿಗೆ ಮಂಗಳವಾರ ಕೋವಿಡ್–19 ಇರುವುದು ಖಚಿತವಾಗಿದೆ.</p>.<p>ಜಿಲ್ಲೆಯಲ್ಲಿ ಒಟ್ಟು 1,76,185 ಮಂದಿಯ ಗಂಟಲು ದ್ರವ ಪರೀಕ್ಷೆ ನಡೆಸಲಾಗಿದ್ದು, 1,51,356 ಮಂದಿಯ ವರದಿ ನೆಗೆಟಿವ್ ಬಂದಿದೆ. 18,786 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,462 ಸಕ್ರಿಯ ಪ್ರಕರಣಗಳಿದ್ದು, ಮೃತರ ಸಂಖ್ಯೆ 581ಕ್ಕೆ ಏರಿದೆ.</p>.<p>6.58 ಲಕ್ಷ ದಂಡ: ಜಿಲ್ಲೆಯಲ್ಲಿ ಈವರೆಗೆ ಕೋವಿಡ್–19 ನಿಯಮ ಉಲ್ಲಂಘನೆಯ 5,345 ಪ್ರಕರಣ ಪತ್ತೆಯಾಗಿದ್ದು,₹6,58,385 ದಂಡ ವಸೂಲಿ ಮಾಡಲಾಗಿದೆ.</p>.<p>ಸರ್ಕಾರದ ಆದೇಶದಂತೆ ನಿಯಮ ಉಲ್ಲಂಘಿಸಿದಲ್ಲಿ ನಗರ ಸ್ಥಳೀಯ ಸಂಸ್ಥೆಗಳು, ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಿಂದ ದಂಡ ವಸೂಲಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p><strong>ಕಾಸರಗೋಡು– 416 ಮಂದಿಗೆ ಸೋಂಕು:</strong></p>.<p>ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 416 ಮಂದಿಗೆ ಕೋವಿಡ್ ದೃಢಪಟ್ಟಿದೆ. 398 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. 202 ಮಂದಿ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 12,476 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 11,108 ಮಂದಿಗೆ ಸಂಪರ್ಕದಿಂದ ಮೂಲಕ ಸೋಂಕು ತಗಲಿದೆ. ಒಟ್ಟು 8,904 ಮಂದಿ ಗುಣಮುಖರಾಗಿದ್ದಾರೆ. 3678 ಸಕ್ರಿಯ ಪ್ರಕರಣಗಳಿದ್ದು, ಮೃತಪಟ್ಟವರ ಸಂಖ್ಯೆ 105ಕ್ಕೆ ಏರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>