<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 310 ಮಂದಿಗೆ ಕೋವಿಡ್–19 ದೃಢವಾಗಿದ್ದು, 256 ಮಂದಿ ಗುಣಮುಖರಾಗಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ಬುಧವಾರ ದೃಢವಾಗಿದೆ.</p>.<p>ಸೋಂಕಿತರ ಪೈಕಿ ಮಂಗಳೂರು ತಾಲ್ಲೂಕಿನ 188, ಬಂಟ್ವಾಳದ 27, ಪುತ್ತೂರು, ಸುಳ್ಯ ತಾಲ್ಲೂಕಿನ ತಲಾ 25, ಬೆಳ್ತಂಗಡಿ ತಾಲ್ಲೂಕಿನ 26 ಹಾಗೂ ಬೇರೆ ಜಿಲ್ಲೆಯ 19 ಮಂದಿ ಸೇರಿದ್ದಾರೆ. 82 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢವಾಗಿದ್ದರೆ, 176 ಮಂದಿಯಲ್ಲಿ ಐಎಲ್ಐ, 6 ಜನರಲ್ಲಿ ಎಸ್ಎಆರ್ಐ ಲಕ್ಷಣಗಳಿಂದ ಕೋವಿಡ್–19 ಪತ್ತೆಯಾಗಿದೆ. 46 ಸೋಂಕಿತರ ಸಂಪರ್ಕದ ಮೂಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>131 ಪುರುಷರು, 70 ಮಹಿಳೆಯರು ಸೇರಿ 201 ಮಂದಿಗೆ ರೋಗಲಕ್ಷಣಗಳಿದ್ದರೆ, 65 ಪುರುಷರು ಹಾಗೂ 44 ಮಹಿಳೆಯರು ಸೇರಿದಂತೆ 109 ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ.</p>.<p><strong>256 ಜನ ಗುಣಮುಖ:</strong> ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ಹಾಗೂ ಹೋಂ ಐಸೋಲೇಷನ್ನಲ್ಲಿದ್ದ 172 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p><strong>6 ಸಾವು:</strong> ಮಂಗಳೂರು ತಾಲ್ಲೂಕಿನ ಐವರು, ಬೇರೆ ಜಿಲ್ಲೆಯ ಒಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ದೃಢವಾಗಿದೆ. ಅನಾರೋಗ್ಯದ ಸಮಸ್ಯೆಯಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p class="Briefhead"><strong>ಕಾಸರಗೋಡು: 270 ಪ್ರಕರಣ</strong></p>.<p>ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 270 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 242 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 144 ಮಂದಿ ಗುಣಮುಖರಾಗಿದ್ದಾರೆ.</p>.<p>ಇದುವರೆಗೆ 6,678 ಮಂದಿಗೆ ಸೋಂಕು ದೃಢಪಟ್ಟಿದೆ. 4,642 ಮಂದಿ ಗುಣಮುಖರಾಗಿದ್ದಾರೆ. 46 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 310 ಮಂದಿಗೆ ಕೋವಿಡ್–19 ದೃಢವಾಗಿದ್ದು, 256 ಮಂದಿ ಗುಣಮುಖರಾಗಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ಇರುವುದು ಬುಧವಾರ ದೃಢವಾಗಿದೆ.</p>.<p>ಸೋಂಕಿತರ ಪೈಕಿ ಮಂಗಳೂರು ತಾಲ್ಲೂಕಿನ 188, ಬಂಟ್ವಾಳದ 27, ಪುತ್ತೂರು, ಸುಳ್ಯ ತಾಲ್ಲೂಕಿನ ತಲಾ 25, ಬೆಳ್ತಂಗಡಿ ತಾಲ್ಲೂಕಿನ 26 ಹಾಗೂ ಬೇರೆ ಜಿಲ್ಲೆಯ 19 ಮಂದಿ ಸೇರಿದ್ದಾರೆ. 82 ಜನರಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢವಾಗಿದ್ದರೆ, 176 ಮಂದಿಯಲ್ಲಿ ಐಎಲ್ಐ, 6 ಜನರಲ್ಲಿ ಎಸ್ಎಆರ್ಐ ಲಕ್ಷಣಗಳಿಂದ ಕೋವಿಡ್–19 ಪತ್ತೆಯಾಗಿದೆ. 46 ಸೋಂಕಿತರ ಸಂಪರ್ಕದ ಮೂಲವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.</p>.<p>131 ಪುರುಷರು, 70 ಮಹಿಳೆಯರು ಸೇರಿ 201 ಮಂದಿಗೆ ರೋಗಲಕ್ಷಣಗಳಿದ್ದರೆ, 65 ಪುರುಷರು ಹಾಗೂ 44 ಮಹಿಳೆಯರು ಸೇರಿದಂತೆ 109 ಜನರಲ್ಲಿ ಯಾವುದೇ ರೋಗ ಲಕ್ಷಣಗಳಿಲ್ಲ.</p>.<p><strong>256 ಜನ ಗುಣಮುಖ:</strong> ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 84 ಹಾಗೂ ಹೋಂ ಐಸೋಲೇಷನ್ನಲ್ಲಿದ್ದ 172 ಜನರ ಗಂಟಲು ದ್ರವ ಮಾದರಿ ವರದಿ ನೆಗೆಟಿವ್ ಬಂದಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ.</p>.<p><strong>6 ಸಾವು:</strong> ಮಂಗಳೂರು ತಾಲ್ಲೂಕಿನ ಐವರು, ಬೇರೆ ಜಿಲ್ಲೆಯ ಒಬ್ಬರು ಮೃತಪಟ್ಟಿದ್ದು, ಅವರಿಗೆ ಕೋವಿಡ್–19 ದೃಢವಾಗಿದೆ. ಅನಾರೋಗ್ಯದ ಸಮಸ್ಯೆಯಿಂದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.</p>.<p class="Briefhead"><strong>ಕಾಸರಗೋಡು: 270 ಪ್ರಕರಣ</strong></p>.<p>ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 270 ಮಂದಿಗೆ ಕೋವಿಡ್–19 ದೃಢಪಟ್ಟಿದೆ. 242 ಮಂದಿಗೆ ಸಂಪರ್ಕದಿಂದ ಸೋಂಕು ತಗಲಿದೆ. 144 ಮಂದಿ ಗುಣಮುಖರಾಗಿದ್ದಾರೆ.</p>.<p>ಇದುವರೆಗೆ 6,678 ಮಂದಿಗೆ ಸೋಂಕು ದೃಢಪಟ್ಟಿದೆ. 4,642 ಮಂದಿ ಗುಣಮುಖರಾಗಿದ್ದಾರೆ. 46 ಮಂದಿ ಮೃತಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>