ಜಿಲ್ಲೆಯಲ್ಲಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಮಂಗಳೂರು ತಾಲ್ಲೂಕಿನಲ್ಲಿ 219, ಬಂಟ್ವಾಳ 61, ಪುತ್ತೂರು 36, ಸುಳ್ಯ 6, ಬೆಳ್ತಂಗಡಿ ತಾಲ್ಲೂಕಿನಲ್ಲಿ 32 ಹಾಗೂ ಬೇರೆ ಜಿಲ್ಲೆಯ 20 ಮಂದಿ ಸೇರಿದ್ದಾರೆ. 236 ಮಂದಿಯಲ್ಲಿ ಶೀತ ಜ್ವರ (ಐಎಲ್ಐ) ಹಾಗೂ 18 ಜನರಲ್ಲಿ ತೀವ್ರ ಉಸಿರಾಟದ ತೊಂದರೆ (ಎಸ್ಎಆರ್ಐ)ಯಿಂದ ಕೋವಿಡ್–19 ದೃಢವಾಗಿದೆ. 120 ಮಂದಿಯ ಸಂಪರ್ಕವನ್ನು ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.