‘ಸಿ ದರ್ಜೆ ದೇವಸ್ಥಾನದಲ್ಲಿ ಕೇವಲ ಅರ್ಚಕರು ಮಾತ್ರವಲ್ಲದೆ, ಪರಿಚಾರಕರು, ಡೋಲುಗಂಟೆಯವರು, ಅಡುಗೆಯವರು, ಸ್ವಚ್ಛತೆ ಮಾಡುವವರು ಎಲ್ಲರೂ ಇದ್ದಾರೆ. ಹಾಗಾಗಿ, ದೇವಸ್ಥಾನದ ಸೇವಾ ಕಾರ್ಯಕ್ಕಾಗಿ ತನ್ನ ಸಮಯ ಕೊಡುವ ಅವರು ಲಾಕ್ಡೌನ್ ಕಾರಣದಿಂದಾಗಿ ಸಮಸ್ಯೆಗೆ ಒಳಗಾಗಿದ್ದಾರೆ. ಕೆಲವು ದೇವಸ್ಥಾನಗಳಲ್ಲಿ ಅರ್ಚಕರು ಮಾತ್ರ ಇದ್ದರೆ, ಮತ್ತೆ ಕೆಲವೆಡೆ 5ಕ್ಕಿಂತ ಅಧಿಕ ಮಂದಿ ದೇವಸ್ಥಾನದ ನಾನಾ ಕೆಲಸ ನಿರ್ವಹಿಸುವ ಸಿಬ್ಬಂದಿ ಇದ್ದಾರೆ. ಎಲ್ಲರೂ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವಾಗ ಎಲ್ಲರಿಗೂ ಪರಿಹಾರ ದೊರೆಯಬೇಕು ಎಂಬುದು ನಮ್ಮ ಕಾಳಜಿಯಾಗಿತ್ತು. ಶಾಸಕ ಹರೀಶ್ ಪೂಂಜರ ವಿಶೇಷವಾದ ಮುತುವರ್ಜಿ, ದೇವಸ್ಥಾನಗಳ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಹಕಾರದಿಂದ ಎಲ್ಲರಿಗೂ ಈ ಪರಿಹಾರ ಸಿಗಲು ಸಾಧ್ಯವಾಗಿದೆ’ ಎನ್ನುತ್ತಾರೆ ದೇವೇಂದ್ರ ಹೆಗ್ಡೆ ಕೊಕ್ರಾಡಿ.