ಕೆಲ ಹೊತ್ತಿನ ಬಳಿಕ ಆತ ಹಂಪನಕಟ್ಟೆಯ ಕ್ಲಾಕ್ ಟವರ್ ಬಳಿ ಇರುವುದು ಗೊತ್ತಾಯಿತು. ಮಂಗಳೂರು ಉತ್ತರ ಠಾಣೆ ಪೊಲೀಸರು ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿ ಆತನ ಮನವೊಲಿಸಿದರು. ಆಪ್ತ ಸಮಾಲೋಚನೆ ನಡೆಸಿ, ಚಿಕಿತ್ಸೆ ಕುರಿತು ಧೈರ್ಯ ತುಂಬಿದರು. ಬಳಿಕ ಆತನನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.