ಉಳ್ಳಾಲ: ತಲಪಾಡಿ ಅಲಂಕಾರುಗುಡ್ಡೆ ಎಂಬಲ್ಲಿ ವಿಷಪ್ರಾಷನದಿಂದ ಒಂದು ದನ ಹಾಗೂ 9 ನಾಯಿಗಳು ಮೃತಪಟ್ಟಿವೆ.
ಅಲಂಕಾರುಗುಡ್ಡೆ ನಿವಾಸಿ ಸತ್ಯೇಂದ್ರ ಎಂಬವರಿಗೆ ಸೇರಿದ ಹಾಲು ನೀಡುವ ದನ ಹಾಗೂ ಸ್ಥಳೀಯರ ನಾಯಿಗಳು ಎರಡು ದಿನಗಳಲ್ಲಿ ಅಸುನೀಗಿವೆ.
ಆಗಂತುಕನೊಬ್ಬ ರಸ್ತೆ ಬದಿಯಲ್ಲಿ ನಾಯಿಗಳಿಗೆ ಆಹಾರ ಹಾಕುತ್ತಾ ಹೋಗಿದ್ದ. ನಂತರದ ದಿನಗಳಲ್ಲಿ ಅಲ್ಲಲ್ಲಿ ನಾಯಿಗಳು ಸತ್ತುಬಿದ್ದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೆಲವು ನಾಯಿಗಳ ಕಳೇಬರ ಕೊಳೆತು ದುರ್ನಾತ ಬೀರುತ್ತಿದೆ. ಕೆಲವು ನಾಯಿಗಳನ್ನು ಸ್ಥಳೀಯರು ಮಣ್ಣಲ್ಲಿ ಹೂತಿದ್ದಾರೆ. ಈ ಕೃತ್ಯದ ಕುರಿತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರು ದೂರು ನೀಡಿದ್ದಾರೆ.