<p><strong>ಮಂಗಳೂರು:</strong> ಸಿಪಿಐ ರಾಷ್ಟ್ರೀಯ ಮಂಡಳಿ ಕರೆಯಂತೆ ಮಂಗಳವಾರ ಸರ್ಕಾರಗಳ ಜನವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧವಾಗಿ ದೇಶದಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇದರ ಅಂಗವಾಗಿ ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.</p>.<p>ಕೋವಿಡ್– 19ರ ವಿರುದ್ಧ ಸರ್ಕಾರ ಘೋಷಿಸಿರುವ ಲಾಕ್ಡೌನ್ ಸಮಯದಲ್ಲಿ ಸರ್ಕಾರ ಬಡವರ ಮತ್ತು ಕಾರ್ಮಿಕರ ಬವಣೆಗಳನ್ನು ನಿರ್ಲಕ್ಷಿಸುತ್ತಿದೆ. ಅಸಂಘಟಿತ ಕಾರ್ಮಿಕರು ಈ ಲಾಕ್ಡೌನ್ ಸಮಯದಲ್ಲಿ ಕೆಲಸವಿಲ್ಲದೇ ಜೀವನೋಪಾಯಕ್ಕಾಗಿ ಪರದಾಡುತ್ತಿದ್ದು, ಅವರಿಗೆ ಪರಿಹಾರ ಒದಗಿಸುವುದರಲ್ಲಿ ಸರ್ಕಾರ ಹಿಂದೆ ಬಿದ್ದಿದೆ ಎಂದು ದೂರಲಾಗಿದೆ.</p>.<p>ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲು ಸೂಕ್ತ ರೈಲು ಅಥವಾ ವಾಹನ ಒದಗಿಸುತ್ತಿಲ್ಲ. ಅವರಿಗೆ ಪಡಿತರ ಮತ್ತು ವಸತಿ ಸಿಗುತ್ತಿಲ್ಲ. ಲಾಕ್ಡೌನ್ ದುರುಪಯೋಗ ಪಡಿಸಿಕೊಂಡು ಕೆಲ ಸರ್ಕಾರಗಳು ಕಾರ್ಮಿಕ ಕಾನೂನುಗಳನ್ನು ಮಾಲೀಕರ ಪರವಾಗಿ ಬದಲಾಯಿಸುತ್ತಿವೆ. 8 ಗಂಟೆಗಳ ಕೆಲಸದ ಹಕ್ಕನ್ನು ಹಿಂಪಡೆದು, ಕಾರ್ಮಿಕರು ದಿನಕ್ಕೆ 12 ಗಂಟೆ ಕೆಲಸ ಮಾಡಬೇಕೆಂಬ ಕಾನೂನು ತರಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬೀಡಿ ಕಾರ್ಮಿಕರಿಗೆ ಯಾವುದೇ ಪರಿಹಾರ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ.</p>.<p>ಇವೆಲ್ಲವುಗಳನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು. ನಿಯೋಗದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್, ಎಐಟಿಯುಸಿ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್.ವಿ. ರಾವ್, ಪಕ್ಷದ ಮುಂದಾಳುಗಳಾದ ನಾಗೇಶ್ ಕೆ., ಜಗತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ಸಿಪಿಐ ರಾಷ್ಟ್ರೀಯ ಮಂಡಳಿ ಕರೆಯಂತೆ ಮಂಗಳವಾರ ಸರ್ಕಾರಗಳ ಜನವಿರೋಧಿ ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧವಾಗಿ ದೇಶದಾದ್ಯಂತ ಪ್ರತಿಭಟನೆ ನಡೆಸಲಾಯಿತು. ಇದರ ಅಂಗವಾಗಿ ಸಿಪಿಐ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.</p>.<p>ಕೋವಿಡ್– 19ರ ವಿರುದ್ಧ ಸರ್ಕಾರ ಘೋಷಿಸಿರುವ ಲಾಕ್ಡೌನ್ ಸಮಯದಲ್ಲಿ ಸರ್ಕಾರ ಬಡವರ ಮತ್ತು ಕಾರ್ಮಿಕರ ಬವಣೆಗಳನ್ನು ನಿರ್ಲಕ್ಷಿಸುತ್ತಿದೆ. ಅಸಂಘಟಿತ ಕಾರ್ಮಿಕರು ಈ ಲಾಕ್ಡೌನ್ ಸಮಯದಲ್ಲಿ ಕೆಲಸವಿಲ್ಲದೇ ಜೀವನೋಪಾಯಕ್ಕಾಗಿ ಪರದಾಡುತ್ತಿದ್ದು, ಅವರಿಗೆ ಪರಿಹಾರ ಒದಗಿಸುವುದರಲ್ಲಿ ಸರ್ಕಾರ ಹಿಂದೆ ಬಿದ್ದಿದೆ ಎಂದು ದೂರಲಾಗಿದೆ.</p>.<p>ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲು ಸೂಕ್ತ ರೈಲು ಅಥವಾ ವಾಹನ ಒದಗಿಸುತ್ತಿಲ್ಲ. ಅವರಿಗೆ ಪಡಿತರ ಮತ್ತು ವಸತಿ ಸಿಗುತ್ತಿಲ್ಲ. ಲಾಕ್ಡೌನ್ ದುರುಪಯೋಗ ಪಡಿಸಿಕೊಂಡು ಕೆಲ ಸರ್ಕಾರಗಳು ಕಾರ್ಮಿಕ ಕಾನೂನುಗಳನ್ನು ಮಾಲೀಕರ ಪರವಾಗಿ ಬದಲಾಯಿಸುತ್ತಿವೆ. 8 ಗಂಟೆಗಳ ಕೆಲಸದ ಹಕ್ಕನ್ನು ಹಿಂಪಡೆದು, ಕಾರ್ಮಿಕರು ದಿನಕ್ಕೆ 12 ಗಂಟೆ ಕೆಲಸ ಮಾಡಬೇಕೆಂಬ ಕಾನೂನು ತರಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಹುಸಂಖ್ಯಾತರಾಗಿರುವ ಬೀಡಿ ಕಾರ್ಮಿಕರಿಗೆ ಯಾವುದೇ ಪರಿಹಾರ ಒದಗಿಸಿಲ್ಲ ಎಂದು ಆರೋಪಿಸಲಾಗಿದೆ.</p>.<p>ಇವೆಲ್ಲವುಗಳನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಯಿತು. ನಿಯೋಗದಲ್ಲಿ ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್, ಎಐಟಿಯುಸಿ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್.ವಿ. ರಾವ್, ಪಕ್ಷದ ಮುಂದಾಳುಗಳಾದ ನಾಗೇಶ್ ಕೆ., ಜಗತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>