<p><strong>ಮಂಗಳೂರು:</strong> ‘ಜೀವನಾವಶ್ಯಕ ವಸ್ತು ಮತ್ತು ಸೇವೆಗಳ ಬೆಲೆ ಏರಿಸಿ ಜನರನ್ನು ಶೋಷಿಸಲಾಗುತ್ತಿದೆ. ಬಿಜೆಪಿಯದು ಬೆಲೆ ಏರಿಸುವ ಭಕ್ತಿಯಾಗಿದೆ’ ಎಂದು ಸಿಪಿಎಂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿ. ಕುಕ್ಯಾನ್ ಆರೋಪಿಸಿದರು.</p>.<p>ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಫಲವಾದ ಕೇಂದ್ರ ಸರ್ಕಾರದ ನೀತಿಯನ್ನು ಪ್ರತಿಭಟಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ ಮಂಗಳೂರು ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಅವರು ಮಾತನಾಡಿದರು.</p>.<p>‘ಜನರ ಮೂಲಭೂತ ಸಮಸ್ಯೆ ಮರೆಮಾಚಲು ಧರ್ಮವನ್ನು ರಾಜಕೀಯಕ್ಕೆ ಬಳಸಿ ಭಾವನಾತ್ಮಕ ವಿಚಾರದಲ್ಲಿ ಜನರೊಳಗೆ ವಿಘಟನೆ ತರುತ್ತಿರುವುದು ಈ ಸರ್ಕಾರದ ಹವ್ಯಾಸವಾಗಿದೆ’ ಎಂದು ಆಪಾದಿಸಿದರು.</p>.<p>ವಿ.ಎಸ್. ಬೇರಿಂಜ ಸ್ವಾಗತಿಸಿದರು. ಕಟ್ಟಡ ಕಾರ್ಮಿಕರ ಮುಖಂಡ ಎಂ. ಕರುಣಾಕರ್, ಎಐವೈಎಫ್ ತಾಲ್ಲೂಕು ಕಾರ್ಯದರ್ಶಿ ಜಗತ್ಪಾಲ್ ಕೋಡಿಕಲ್ ವಂದಿಸಿದರು. ಆರ್.ಡಿ ಸೋನ್ಸ್, ಭುಜಂಗ ಕೋಡಿಕಲ್, ಸುಧಾಕರ್ ಕಲ್ಲೂರು, ಕೃಷ್ಣಪ್ಪ ವಾಮಂಜೂರು, ದಿನೇಶ್ ಕಾಯರ್ಮಾರ್, ಸುಲೋಚನಾ ಕವತ್ತಾರು, ಸಂಜೀವಿ ಹಳೆಯಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು:</strong> ‘ಜೀವನಾವಶ್ಯಕ ವಸ್ತು ಮತ್ತು ಸೇವೆಗಳ ಬೆಲೆ ಏರಿಸಿ ಜನರನ್ನು ಶೋಷಿಸಲಾಗುತ್ತಿದೆ. ಬಿಜೆಪಿಯದು ಬೆಲೆ ಏರಿಸುವ ಭಕ್ತಿಯಾಗಿದೆ’ ಎಂದು ಸಿಪಿಎಂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಘಟಕದ ಕಾರ್ಯದರ್ಶಿ ವಿ. ಕುಕ್ಯಾನ್ ಆರೋಪಿಸಿದರು.</p>.<p>ಬೆಲೆ ಏರಿಕೆಯನ್ನು ನಿಯಂತ್ರಿಸಲು ವಿಫಲವಾದ ಕೇಂದ್ರ ಸರ್ಕಾರದ ನೀತಿಯನ್ನು ಪ್ರತಿಭಟಿಸಿ ಪಕ್ಷದ ರಾಷ್ಟ್ರವ್ಯಾಪಿ ಆಂದೋಲನದ ಭಾಗವಾಗಿ ಮಂಗಳೂರು ತಾಲ್ಲೂಕು ಸಮಿತಿ ನೇತೃತ್ವದಲ್ಲಿ ಸೋಮವಾರ ಇಲ್ಲಿ ನಡೆದ ಪ್ರತಿಭಟನಾ ಪ್ರದರ್ಶನದಲ್ಲಿ ಅವರು ಮಾತನಾಡಿದರು.</p>.<p>‘ಜನರ ಮೂಲಭೂತ ಸಮಸ್ಯೆ ಮರೆಮಾಚಲು ಧರ್ಮವನ್ನು ರಾಜಕೀಯಕ್ಕೆ ಬಳಸಿ ಭಾವನಾತ್ಮಕ ವಿಚಾರದಲ್ಲಿ ಜನರೊಳಗೆ ವಿಘಟನೆ ತರುತ್ತಿರುವುದು ಈ ಸರ್ಕಾರದ ಹವ್ಯಾಸವಾಗಿದೆ’ ಎಂದು ಆಪಾದಿಸಿದರು.</p>.<p>ವಿ.ಎಸ್. ಬೇರಿಂಜ ಸ್ವಾಗತಿಸಿದರು. ಕಟ್ಟಡ ಕಾರ್ಮಿಕರ ಮುಖಂಡ ಎಂ. ಕರುಣಾಕರ್, ಎಐವೈಎಫ್ ತಾಲ್ಲೂಕು ಕಾರ್ಯದರ್ಶಿ ಜಗತ್ಪಾಲ್ ಕೋಡಿಕಲ್ ವಂದಿಸಿದರು. ಆರ್.ಡಿ ಸೋನ್ಸ್, ಭುಜಂಗ ಕೋಡಿಕಲ್, ಸುಧಾಕರ್ ಕಲ್ಲೂರು, ಕೃಷ್ಣಪ್ಪ ವಾಮಂಜೂರು, ದಿನೇಶ್ ಕಾಯರ್ಮಾರ್, ಸುಲೋಚನಾ ಕವತ್ತಾರು, ಸಂಜೀವಿ ಹಳೆಯಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>