ಹತ್ತು ವರ್ಷಗಳಿಂದ ಕುಂಟುತ್ತಾ ಸಾಗಿದ್ದ ಮೇಲ್ಸೇತುವೆ ಕಾಮಗಾರಿ, ಜನವರಿ ಅಂತ್ಯದಲ್ಲಿ ಕೊನೆಗೊಂಡಿತ್ತು. ಜನವರಿ 31ರಂದು ಸಂಸದ ನಳಿನ್ ಕುಮಾರ್ ಕಟೀಲ್ ಈ ಮೇಲ್ಸೇತುವೆಯನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದರು. ಈಗ ಮೇಲ್ಸೇತುವೆಯ ಮಧ್ಯ ಭಾಗದ ರಸ್ತೆಗಳು ಮತ್ತು ತಡೆಗೋಡೆಯ ಹಲವು ಕಡೆಗಳಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ.