<p><strong>ಪುತ್ತೂರು:</strong> ಫೈನಾನ್ಸ್ ಸಾಲ ಸಂದಾಯ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ಹೊರವಲಯದ ಪಡೀಲು ನಿವಾಸಿ ರಾಜು ಬಂಧಿತ ಆರೋಪಿ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.</p>.<p>ಕೆಮ್ಮಾಯಿಯಲ್ಲಿರುವ 'ಎಸ್.ವಿ.ಕಿಚನ್ ವೇರ್ಸ್' ಪಾತ್ರೆಗಳ ತಯಾರಿಕಾ ಸಂಸ್ಥೆಯಲ್ಲಿ ಪಾತ್ರೆಗಳ ತಯಾರಿಕೆ ಕೆಲಸ ಮಾಡುತ್ತಿದ್ದ ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ನಿವಾಸಿ ವಿಶ್ವನಾಥ (40) ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವಿಶ್ವನಾಥ ಅವರು ಮರಣ ಪತ್ರವೊಂದನ್ನು ಬರೆದಿಟ್ಟಿದ್ದರು.</p>.<p>‘ವಿಶ್ವನಾಥ ಅವರ ಹೆಸರಿನಲ್ಲಿ ರಾಜು ಎಂಬಾತ ಸಾಲ ಪಡೆದಿದ್ದು,ಪದೇ ಪದೇ ಕರೆ ಮಾಡಿ ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದುದರಿಂದ ಆತ್ಮಹತ್ಯೆ ಮಾಡಿರುವುದಾಗಿ’ ಮೃತರ ಪತ್ನಿ ಸುನಿತಾ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು:</strong> ಫೈನಾನ್ಸ್ ಸಾಲ ಸಂದಾಯ ವಿಚಾರಕ್ಕೆ ಸಂಬಂಧಿಸಿ ಪುತ್ತೂರು ನಗರದ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ದಾರಂದಕುಕ್ಕು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ, ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.</p>.<p>ನಗರದ ಹೊರವಲಯದ ಪಡೀಲು ನಿವಾಸಿ ರಾಜು ಬಂಧಿತ ಆರೋಪಿ. ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.</p>.<p>ಕೆಮ್ಮಾಯಿಯಲ್ಲಿರುವ 'ಎಸ್.ವಿ.ಕಿಚನ್ ವೇರ್ಸ್' ಪಾತ್ರೆಗಳ ತಯಾರಿಕಾ ಸಂಸ್ಥೆಯಲ್ಲಿ ಪಾತ್ರೆಗಳ ತಯಾರಿಕೆ ಕೆಲಸ ಮಾಡುತ್ತಿದ್ದ ಚಿಕ್ಕಮುಡ್ನೂರು ಗ್ರಾಮದ ಕೊಲ್ಯ ನಿವಾಸಿ ವಿಶ್ವನಾಥ (40) ಅವರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ವಿಶ್ವನಾಥ ಅವರು ಮರಣ ಪತ್ರವೊಂದನ್ನು ಬರೆದಿಟ್ಟಿದ್ದರು.</p>.<p>‘ವಿಶ್ವನಾಥ ಅವರ ಹೆಸರಿನಲ್ಲಿ ರಾಜು ಎಂಬಾತ ಸಾಲ ಪಡೆದಿದ್ದು,ಪದೇ ಪದೇ ಕರೆ ಮಾಡಿ ಹಣ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದುದರಿಂದ ಆತ್ಮಹತ್ಯೆ ಮಾಡಿರುವುದಾಗಿ’ ಮೃತರ ಪತ್ನಿ ಸುನಿತಾ ಅವರು ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>