ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ವಿನೀಶ್ (21) ಆರೋಪಿ. ರೆಖ್ಯ ಸಮೀಪದ ಎಂಜಿರ ಮಲ್ನಾಡ್ ಹೋಟೆಲ್ ಸಮೀಪ ಮಹಿಳೆ ಕೀಯನ್ನು ಸ್ಕೂಟಿಯಲ್ಲಿಯೇ ಬಿಟ್ಟು ಹೋಟೆಲಿಗೆ ಹೋಗಿದ್ದರು. ವಿನೀಶ್ ಸ್ಕೂಟಿಯನ್ನು ಕದ್ದು ಗುಂಡ್ಯ ಕಡೆಗೆ ಪರಾರಿಯಾಗಿದ್ದ. ಸ್ಥಳೀಯರು ಗುಂಡ್ಯ ಪೊಲೀಸ್ ಚೆಕ್ಪೋಸ್ಟ್ಗೆ ಮಾಹಿತಿ ನೀಡಿದ್ದರು. ಆರೋಪಿ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹೇಳಿದ್ದಾನೆ. ಧರ್ಮಸ್ಥಳ ಪೊಲೀಸರ ಮಾಹಿತಿ ಮೇರೆಗೆ ಕೇರಳ ಪೊಲೀಸರು ಬಂದು ವಶಕ್ಕೆ ಪಡೆದುಕೊಂಡಿದ್ದಾರೆ.