ಉಪ್ಪಿನಂಗಡಿ: ಕೊಯಿಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಮನೆಯೊಳಗೆ ಅಕ್ರಮವಾಗಿ ಹೆಬ್ಬಲಸು ಮರಗಳನ್ನು ದಾಸ್ತಾನು ಇರಿಸಿದ್ದ ಪ್ರಕರಣವನ್ನು ಪುತ್ತೂರು ವಲಯ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಪತ್ತೆ ಹಚ್ಚಿದ್ದು ಮರವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಜನತಾ ಕಾಲೊನಿ ನಿವಾಸಿ ಹಾರಿಸ್ ಎಂಬವರ ಮನೆಯಲ್ಲಿ ದಾಸ್ತಾನು ಇರಿಸಿದ್ದ ಬಗ್ಗೆ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ 15 ಸೈಜ್ ವಶಕ್ಕೆ ಪಡೆದುಕೊಂಡಿದ್ದಾರೆ. ಮರದ ಮೌಲ್ಯ ₹ 40 ಸಾವಿರ ಎಂದು ಅಂದಾಜಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಕಿರಣ್ ತಿಳಸಿದ್ದಾರೆ.