ಮಂಗಳೂರು: ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಆದ್ಯಪಾಡಿಯ ಜಲಾಶಯದಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿದ್ದಾನೆ.
ಗುರುಪುರ ಸಮೀಪದ ಮಾಲಿಕ್ (17) ಮೃತಪಟ್ಟ ಯುವಕ. ಮಂಗಳವಾರ ಮಧ್ಯಾಹ್ನ ಈತ ತನ್ನ ಸ್ನೇಹಿತರ ಜತೆ ಸೇರಿ ಆದ್ಯಪಾಡಿ ಡ್ಯಾಂ ಬಳಿ ತೆರಳಿದ್ದ. ಈ ಸಂದರ್ಭ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.