<p><strong>ಪುತ್ತೂರು: </strong>ಹೊರವಲಯದ ಪಾಂಗಳಾಯಿ ಎಂಬಲ್ಲಿನ ಮನೆಯೊಂದರಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ನಿಗೂಢವಾಗಿದೆ.</p>.<p>ಪಾಂಗಾಳಾಯಿ ನಿವಾಸಿ ಚಂದ್ರಶೇಖರ ಪೂಜಾರಿ (57) ಮೃತಪಟ್ಟವರು. ಅವರ ಮನೆಯ ಕಡೆಯಿಂದ ಕಳೆದ 3 ದಿನಗಳಿಂದೀಚೆಗೆ ದುರ್ವಾಸನೆ ಹರಡಿತ್ತು. ಕೊನೆಗೆ ಸಂಶಯಗೊಂಡ ಸ್ಥಳೀಯ ಮಹಿಳೆಯೊಬ್ಬರು ಬುಧವಾರ ಮನೆಗೆ ತೆರಳಿ ಪರಿಶೀಲಿಸಿದಾಗ, ಬಾಗಿಲು, ಚಿಲಕ ಹಾಕಿಕೊಂಡಿತ್ತು. ಮನೆಯೊಳಗೆ ನೊಣಗಳು ಹಾರಾಡುತ್ತಿದ್ದದು ಕಂಡು ಬಂದಿತ್ತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ನಗರ ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಮನೆ ಪ್ರವೇಶಿಸಿ ಪರಿಶೀಲಿಸಿದಾಗ ಮಲಗುವ ಕೊಠಡಿಯ ಮಂಚದ ಕೆಳಗಡೆ ಚಂದ್ರಶೇಖರ್ ಅವರ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯಿತು. ಅಸ್ಥಿಪಂಜರ ಸ್ಥಿತಿಯಲ್ಲಿತ್ತು.</p>.<p>ಈ ಹಿಂದೆ ಪುತ್ತೂರಿನ ಬಸ್ ನಿಲ್ದಾಣದ ಸಮೀಪ ಹಿಂದೂ ಮಿಲಿಟರಿ ಹೋಟೆಲ್ ನಡೆಸುತ್ತಿದ್ದ ಬಾಬು ಪೂಜಾರಿ ಅವರ 5 ಹೆಣ್ಣು ಮತ್ತು 5 ಗಂಡು ಮಕ್ಕಳಲ್ಲಿ ಚಂದ್ರಶೇಖರ್ 7ನೇಯವರಾಗಿದ್ದರು. ಟೈಲರಿಂಗ್ ವೃತ್ತಿ ನಡೆಸುತ್ತಿದ್ದು, 10 ವರ್ಷಗಳಿಂದ ವೃತ್ತಿ ನಡೆಸುತ್ತಿರಲಿಲ್ಲ. ಮೂಲ ಮನೆಯಾದ ಪಾಂಗಾಳಾಯಿ ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದರು. ಯಾರೊಂದಿಗೂ ಬೆರೆಯದೆ, ಏನನ್ನು ಕೊಟ್ಟರೂ ತಿನ್ನುತ್ತಿರಲಿಲ್ಲ. ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.</p>.<p>ಕಳೆದ ಇದೇ 7 ರಂದು ಚಂದ್ರಶೇಖರ ಪೂಜಾರಿ ಅವರು ವಾಸ್ತವ್ಯವಿದ್ದ ಪಾಂಗಳಾಯಿಯ ಮನೆಗೆ ಬೆಂಗಳೂರಿನಲ್ಲಿ ನೆಲೆಸಿರುವ ಅವರ ಅಣ್ಣ ಪ್ರಭಾಕರ್ ಎಂಬವರು ಬಂದು ಹೋಗಿದ್ದರು. ಆ ಬಳಿಕ ಚಂದ್ರಶೇಖರ ಅವರನ್ನು ಸ್ಥಳಿಯರು ಯಾರೂ ನೋಡಿಲ್ಲ ಎಂಬ ಮಾಹಿತಿ ಲಭಿಸಿದೆ.</p>.<p>ಯಾವಾಗಲೂ ಮನೆಯಲ್ಲಿ ಬಾಗಿಲು ಚಿಲಕ ಹಾಕಿಯೇ ಒಳಗಡೆ ಇರುತ್ತಿದ್ದ ಚಂದ್ರಶೇಖರ್ ಅವರು ತಮ್ಮ ಕುಟುಂಬದ ಸಹೋದರ ಸಹೋದರಿಯರು ಬಂದಾಗ ಮಾತ್ರ ಬಾಗಿಲು ತೆಗೆಯುತ್ತಿದ್ದರು. ಯಾರ ಸಂಪರ್ಕವೂ ಅವರಿಗಿರಲಿಲ್ಲ. ಇದೇ 9ರಂದೇ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ನಗರ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಶವದ ಮಹಜರು ಪ್ರಕ್ರಿಯೆ ನಡೆಸಲಾಯಿತು. ಮರಣೋತ್ತರ ವರದಿಯ ಬಳಿಕವಷ್ಟೇ ಸಾವಿನ ಕಾರಣ ತಿಳಿದು ಬರಬೇಕಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ಹೊರವಲಯದ ಪಾಂಗಳಾಯಿ ಎಂಬಲ್ಲಿನ ಮನೆಯೊಂದರಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ನಿಗೂಢವಾಗಿದೆ.</p>.<p>ಪಾಂಗಾಳಾಯಿ ನಿವಾಸಿ ಚಂದ್ರಶೇಖರ ಪೂಜಾರಿ (57) ಮೃತಪಟ್ಟವರು. ಅವರ ಮನೆಯ ಕಡೆಯಿಂದ ಕಳೆದ 3 ದಿನಗಳಿಂದೀಚೆಗೆ ದುರ್ವಾಸನೆ ಹರಡಿತ್ತು. ಕೊನೆಗೆ ಸಂಶಯಗೊಂಡ ಸ್ಥಳೀಯ ಮಹಿಳೆಯೊಬ್ಬರು ಬುಧವಾರ ಮನೆಗೆ ತೆರಳಿ ಪರಿಶೀಲಿಸಿದಾಗ, ಬಾಗಿಲು, ಚಿಲಕ ಹಾಕಿಕೊಂಡಿತ್ತು. ಮನೆಯೊಳಗೆ ನೊಣಗಳು ಹಾರಾಡುತ್ತಿದ್ದದು ಕಂಡು ಬಂದಿತ್ತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ನಗರ ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಮನೆ ಪ್ರವೇಶಿಸಿ ಪರಿಶೀಲಿಸಿದಾಗ ಮಲಗುವ ಕೊಠಡಿಯ ಮಂಚದ ಕೆಳಗಡೆ ಚಂದ್ರಶೇಖರ್ ಅವರ ಮೃತದೇಹ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಯಿತು. ಅಸ್ಥಿಪಂಜರ ಸ್ಥಿತಿಯಲ್ಲಿತ್ತು.</p>.<p>ಈ ಹಿಂದೆ ಪುತ್ತೂರಿನ ಬಸ್ ನಿಲ್ದಾಣದ ಸಮೀಪ ಹಿಂದೂ ಮಿಲಿಟರಿ ಹೋಟೆಲ್ ನಡೆಸುತ್ತಿದ್ದ ಬಾಬು ಪೂಜಾರಿ ಅವರ 5 ಹೆಣ್ಣು ಮತ್ತು 5 ಗಂಡು ಮಕ್ಕಳಲ್ಲಿ ಚಂದ್ರಶೇಖರ್ 7ನೇಯವರಾಗಿದ್ದರು. ಟೈಲರಿಂಗ್ ವೃತ್ತಿ ನಡೆಸುತ್ತಿದ್ದು, 10 ವರ್ಷಗಳಿಂದ ವೃತ್ತಿ ನಡೆಸುತ್ತಿರಲಿಲ್ಲ. ಮೂಲ ಮನೆಯಾದ ಪಾಂಗಾಳಾಯಿ ಮನೆಯಲ್ಲಿ ಒಂಟಿಯಾಗಿ ಬದುಕುತ್ತಿದ್ದರು. ಯಾರೊಂದಿಗೂ ಬೆರೆಯದೆ, ಏನನ್ನು ಕೊಟ್ಟರೂ ತಿನ್ನುತ್ತಿರಲಿಲ್ಲ. ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.</p>.<p>ಕಳೆದ ಇದೇ 7 ರಂದು ಚಂದ್ರಶೇಖರ ಪೂಜಾರಿ ಅವರು ವಾಸ್ತವ್ಯವಿದ್ದ ಪಾಂಗಳಾಯಿಯ ಮನೆಗೆ ಬೆಂಗಳೂರಿನಲ್ಲಿ ನೆಲೆಸಿರುವ ಅವರ ಅಣ್ಣ ಪ್ರಭಾಕರ್ ಎಂಬವರು ಬಂದು ಹೋಗಿದ್ದರು. ಆ ಬಳಿಕ ಚಂದ್ರಶೇಖರ ಅವರನ್ನು ಸ್ಥಳಿಯರು ಯಾರೂ ನೋಡಿಲ್ಲ ಎಂಬ ಮಾಹಿತಿ ಲಭಿಸಿದೆ.</p>.<p>ಯಾವಾಗಲೂ ಮನೆಯಲ್ಲಿ ಬಾಗಿಲು ಚಿಲಕ ಹಾಕಿಯೇ ಒಳಗಡೆ ಇರುತ್ತಿದ್ದ ಚಂದ್ರಶೇಖರ್ ಅವರು ತಮ್ಮ ಕುಟುಂಬದ ಸಹೋದರ ಸಹೋದರಿಯರು ಬಂದಾಗ ಮಾತ್ರ ಬಾಗಿಲು ತೆಗೆಯುತ್ತಿದ್ದರು. ಯಾರ ಸಂಪರ್ಕವೂ ಅವರಿಗಿರಲಿಲ್ಲ. ಇದೇ 9ರಂದೇ ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.</p>.<p>ನಗರ ಠಾಣೆಯ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ನೇತೃತ್ವದಲ್ಲಿ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಶವದ ಮಹಜರು ಪ್ರಕ್ರಿಯೆ ನಡೆಸಲಾಯಿತು. ಮರಣೋತ್ತರ ವರದಿಯ ಬಳಿಕವಷ್ಟೇ ಸಾವಿನ ಕಾರಣ ತಿಳಿದು ಬರಬೇಕಿದೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>