ನಗರದ ಬಿಜೈನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಒಂದು ಬಸ್ ಮತ್ತು ಫಳ್ನೀರ್ ಹಾಗೂ ನಂದಿಗುಡ್ಡೆಯಲ್ಲಿ ತಲಾ ಒಂದು ಖಾಸಗಿ ಬಸ್ ಗಳ ಮೇಲೆ ಆರೋಪಿಗಳು ಕಲ್ಲು ತೂರಿದ್ದರು. ಇಬ್ಬರೂ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಬೆಂಬಲಿಗರಾಗಿದ್ದಾರೆ.
ಶಿವಕುಮಾರ್ ಅವರ ಬಂಧನ ವಿರೋಧಿಸಿ ಬಸ್ಗಳ ಮೇಲೆ ಕಲ್ಲು ತೂರಾಟ ನಡೆಸಿರುವುದಾಗಿ ವಿಚಾರಣೆ ವೇಳೆ ಆರೋಪಿಗಳು ತಿಳಿಸಿದ್ದಾರೆ ಎಂದು ಗೊತ್ತಾಗಿದೆ.