<p><strong>ಪುತ್ತೂರು: </strong>ಪಾನಮತ್ತರಾಗಿ ನಡೆದ ಜಗಳದ ವೇಳೆ ಅಣ್ಣನೇ ತನ್ನ ಒಡಹುಟ್ಟಿದ ತಮ್ಮನಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಗುರುವಾರ ನಡೆದಿದೆ.</p>.<p>ಕೂಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಿ ಹೊಸೂರು ನಿವಾಸಿ ಮಹಾದೇವ ಗೌಡ (45) ಕೊಲೆಯಾದವರು. ಆತನ ಅಣ್ಣ ನಿಂಗನ ಗೌಡ (58) ಕೊಲೆ ಮಾಡಿರುವ ಆರೋಪಿ.</p>.<p>ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಸಹೋದರರಿಬ್ಬರ ನಡುವೆ ಕುಡಿತದ ಮತ್ತಿನಲ್ಲಿ ಗುರುವಾರ ರಾತ್ರಿ ಜಗಳ ನಡೆದಿದೆ. ಈ ವೇಳೆ ನಿಂಗನ ಗೌಡ ಕಬ್ಬಿಣದ ಸಲಾಕೆಯಿಂದ ಮಹಾದೇವ ಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಅಲ್ಲಿಂದ ಪರಾರಿಯಾಗಿದ್ದಾನೆ.</p>.<p>ಶುಕ್ರವಾರ ಬೆಳಿಗ್ಗೆ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ. ಪುತ್ತೂರು ನಗರ ಠಾಣೆಯ ಸ್ಥಳಕ್ಕೆ ಬಂದು ಆರೋಪಿ ನಿಂಗನ ಗೌಡ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕಂಡುಬಂದಲ್ಲಿ ಪುತ್ತೂರು ನಗರ ಠಾಣೆಗೆ 08251-230555, 9480805361, 8147664989 ಮಾಹಿತಿ ನೀಡುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುತ್ತೂರು: </strong>ಪಾನಮತ್ತರಾಗಿ ನಡೆದ ಜಗಳದ ವೇಳೆ ಅಣ್ಣನೇ ತನ್ನ ಒಡಹುಟ್ಟಿದ ತಮ್ಮನಿಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಗುರುವಾರ ನಡೆದಿದೆ.</p>.<p>ಕೂಲಿ ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹಾವೇರಿ ತಾಲೂಕಿನ ದೇವಿ ಹೊಸೂರು ನಿವಾಸಿ ಮಹಾದೇವ ಗೌಡ (45) ಕೊಲೆಯಾದವರು. ಆತನ ಅಣ್ಣ ನಿಂಗನ ಗೌಡ (58) ಕೊಲೆ ಮಾಡಿರುವ ಆರೋಪಿ.</p>.<p>ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕರಾಗಿದ್ದ ಈ ಸಹೋದರರಿಬ್ಬರ ನಡುವೆ ಕುಡಿತದ ಮತ್ತಿನಲ್ಲಿ ಗುರುವಾರ ರಾತ್ರಿ ಜಗಳ ನಡೆದಿದೆ. ಈ ವೇಳೆ ನಿಂಗನ ಗೌಡ ಕಬ್ಬಿಣದ ಸಲಾಕೆಯಿಂದ ಮಹಾದೇವ ಗೌಡ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಅಲ್ಲಿಂದ ಪರಾರಿಯಾಗಿದ್ದಾನೆ.</p>.<p>ಶುಕ್ರವಾರ ಬೆಳಿಗ್ಗೆ ಘಟನೆ ಸ್ಥಳೀಯರ ಗಮನಕ್ಕೆ ಬಂದಿದೆ. ಪುತ್ತೂರು ನಗರ ಠಾಣೆಯ ಸ್ಥಳಕ್ಕೆ ಬಂದು ಆರೋಪಿ ನಿಂಗನ ಗೌಡ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿ ಕಂಡುಬಂದಲ್ಲಿ ಪುತ್ತೂರು ನಗರ ಠಾಣೆಗೆ 08251-230555, 9480805361, 8147664989 ಮಾಹಿತಿ ನೀಡುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>