ಸುಳ್ಯ ತಾಲ್ಲೂಕಿನ ಮಂಡೆಕೋಲು, ಕರ್ನಾಟಕ ಕೇರಳ ಗಡಿಪ್ರದೇಶ ವ್ಯಾಪ್ತಿಯ ಮುರೂರು, ಬೆಳ್ಳಿಪ್ಪಾಡಿ, ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ ನಡೆಸಿ ಕೃಷಿ ಹಾನಿ ಮಾಡುತ್ತಿದ್ದ ಕಾಡಾನೆಗಳ ಹಿಂಡಿನ ಪೈಕಿ ಒಂಟಿ ಸಲಗವೊಂದು ಬೇರ್ಪಟ್ಟು ಕನಕಮಜಲು-ಮುಗೇರು ಮೂಲಕವಾಗಿ ಪೆರ್ನಾಜೆ ಪರಿಸರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.