ನಗದು ಬಹುಮಾನ: ಚಾಂಪಿಯನ್ ತಂಡಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ₹50 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ವೈಯುಕ್ತಿಕ ಚಾಂಪಿಯನ್ಷಿಪ್ನಲ್ಲಿ ಪ್ರಥಮ ಸ್ಥಾನ ಪಡೆದ ಮಂಗಳೂರು ವಿವಿಯ ನರೇಂದ್ರ ಪ್ರತಾಪ್ (31.52 ನಿಮಿಷ)ಗೆ ₹25 ಸಾವಿರ, ದ್ವಿತೀಯ ಸ್ಥಾನ ಪಡೆದ ಪಂಜಾಬ್ ವಿಶ್ವವಿದ್ಯಾಲಯ ಪಟಿಯಾಲದ ಪಿಂಟು ಕುಮಾರ್ ಯಾದವ್(32.13 ನಿ)ಗೆ ₹20 ಸಾವಿರ, ತೃತೀಯ ಸ್ಥಾನದ ಮದ್ರಾಸ್ ವಿಶ್ವವಿದ್ಯಾಲಯದ ಸತೀಶ್ ಕುಮಾರ್ ಎಸ್.ಎಚ್.(32.22 ನಿ)ಗೆ ₹15 ಸಾವಿರ, ನಾಲ್ಕನೇ ಸ್ಥಾನ ಪಡೆದ ಮಂಗಳೂರು ವಿಶ್ವವಿದ್ಯಾಲಯದ ಅಬ್ದುಲ್ ಬಾರಿ(32.30 ನಿ.)ಗೆ 10 ಸಾವಿರ, ಐದನೇ ಸ್ಥಾನ ಪಡೆದ ಕುಮಾನ್ ವಿಶ್ವವಿದ್ಯಾಲಯದ ನೈನಿತಾಲ್ನ ಮೋಹನ್ ಸೈನಿ(32.49 ನಿ.)ಗೆ ₹5 ಸಾವಿರ, ಆರನೇ ಸ್ಥಾನ ಪಡೆದ ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ರೋಹಿತ್ ಯಾದವ್(32.58)ಗೆ ₹5 ಸಾವಿರ ನಗದು ಬಹುಮಾನ ನೀಡಲಾಯಿತು.