ಅಲ್ಲಿನ ತೀರ್ಥಕೆರೆಯಲ್ಲಿ ತೀರ್ಥಸ್ನಾನ ಮಾಡಿದ ಶ್ರೀಗಳು ರಾಮಾಂಜನೇಯ ದೇವರಿಗೆ ಆರತಿ ಬೆಳಗಿದರು. ಗ್ರಾಮದ ಬೋವಿ ಸಮಾಜ, ಗಟ್ಟಿ ಸಮಾಜ, ಮಳಿಯಾಳಿ ಬಿಲ್ಲವ, ಬಂಟ, ಮೊಗವೀರ, ಬ್ರಾಹ್ಮಣ ಸಮಾಜ ಸಹಿತ ವಿವಿಧ ಸಮುದಾಯಗಳ ಪ್ರಮುಖರು, ಗುರಿಕಾರರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ಸಾರ್ವಜನಿಕರ ಜೊತೆಗೂಡಿ ಮೆರವಣಿಗೆಯ ಮೂಲಕ ಕಡಲ ಕಿನಾರೆಗೆ ತೆರಳಿದ ಶ್ರೀಗಳು ಸಮುದ್ರ ರಾಜನಿಗೆ ಹಾಲೆರೆದು, ಹೂ ಹಣ್ಣು ಸಹಿತ ಅಭಿಷೇಕದೊಂದಿಗೆ ಆರತಿ ಬೆಳಗಿದರು.